ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀತಿ ಸಂಹಿತೆ ಉಲ್ಲಂಘಿಸಿದ ಕಾರುಗಳ ಜಪ್ತಿ

Last Updated 30 ಮಾರ್ಚ್ 2018, 9:27 IST
ಅಕ್ಷರ ಗಾತ್ರ

ಧಾರವಾಡ: ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದ ನಂತರ, ಚುನಾವಣಾಧಿಕಾರಿಯಿಂದ ಪೂರ್ವಾನುಮತಿ ಪಡೆಯದೆ ತಮ್ಮ ವಾಹನಗಳ ಮೇಲೆ ಟಿಕೆಟ್‌ ಆಕಾಂಕ್ಷಿಗಳ ಹಾಗೂ ಪಕ್ಷದ ಪ್ರಚಾರ ಪೋಸ್ಟರ್ ಅಂಟಿಸಿದ್ದ ಎರಡು ಕಾರುಗಳನ್ನು ಉಪನಗರ ಠಾಣೆ ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.‘ಕಾಂಗ್ರೆಸ್‌ ಅಭ್ಯರ್ಥಿ ಜನ ಸೇವಕ ನಮ್ಮ ನಾಯಕ ವಿನಯಣ್ಣ’ ಎಂಬ ಪೋಸ್ಟರ್‌ ಅಂಟಿಸಿದ್ದ ಹಾಗೂ ‘ಜೆಡಿಎಸ್‌ ಅಭ್ಯರ್ಥಿ ಅಲ್ತಾಫ್‌ ಕಿತ್ತೂರು’ ಎಂದು ಗಾಜಿನ ಮೇಲೆ ಬರೆದಿದ್ದ ಕಾರನ್ನು ವಶಕ್ಕೆ ಪಡೆಯಲಾಗಿದೆ.

‘ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದು, ಕಾನೂನು ಕ್ರಮ ಜರುಗಿಸಲು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ’ ಎಂದು ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ಪಾಲಿಕೆ ಸಹಾಯಕ ಆಡಳಿತಾಧಿಕಾರಿ ನಾಗನಗೌಡ ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT