ನವದೆಹಲಿ: ಪರಿಸರ ಶಿಕ್ಷಣ ಹಾಗೂ ರಕ್ಷಣೆಯಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ, ದೆಹಲಿಯ ವಿಜ್ಞಾನ ಮತ್ತು ಪರಿಸರ ಕೇಂದ್ರವನ್ನು (ಸಿಎಸ್ಇ) ಈ ಬಾರಿಯ ಇಂದಿರಾಗಾಂಧಿ ಶಾಂತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ನೇತೃತ್ವದ ಆಯ್ಕೆ ಸಮಿತಿಯು ಈ ನಿರ್ಧಾರ ತೆಗೆದುಕೊಂಡಿದೆ. ಸುಸ್ಥಿರ ಪರಿಸರ ನೀತಿ ಹಾಗೂ ಸಾಮಾಜಿಕ, ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗುವ ಕಾರ್ಯಕ್ರಮಗಳ ರಚನೆ ಮೇಲೆ ಪ್ರಭಾವ ಬೀರಿದ ಅಂಶಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ.