ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಫ್‌ಎಸ್ ಅಧಿಕಾರಿ ಇಂದ್ರಮಣಿ ಪಾಂಡೆ ವಿಶ್ವಸಂಸ್ಥೆ ಖಾಯಂ ಪ್ರತಿನಿಧಿ

Last Updated 1 ಜುಲೈ 2020, 12:44 IST
ಅಕ್ಷರ ಗಾತ್ರ

ನವದೆಹಲಿ: ಹಿರಿಯ ಐಎಫ್ಎಸ್ ಅಧಿಕಾರಿ ಇಂದ್ರಮಣಿ ಪಾಂಡೆ ಅವರನ್ನು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿಯಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಈ ಸಂಬಂಧ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಆದೇಶ ಹೊರಡಿಸಿದೆ. 1990ರ ಸಾಲಿನ ಐಎಫ್ಎಸ್ ಅಧಿಕಾರಿಯಾಗಿರುವ ಇಂದ್ರಮಣಿ ಪಾಂಡೆ 2015ರಲ್ಲಿ ಓಮನ್‌‌ನಲ್ಲಿ ಭಾರತೀಯ ರಾಯಭಾರಿಯಾಗಿದ್ದರು. ಅಲ್ಲದೆ, ಪ್ಯಾರಿಸ್‌ನಲ್ಲಿ ಭಾರತದ ವಿದೇಶಾಂಗ ವ್ಯವಹಾರಗಳ ಅಧಿಕಾರಿಯಾಗಿಯೂ ಸೇವೆಸಲ್ಲಿಸಿದ್ದಾರೆ.

ಜಿನೇವಾದಲ್ಲಿ ಕೇಂದ್ರ ಕಚೇರಿ ಹೊಂದಿರುವ ವಿಶ್ವಸಂಸ್ಥೆಯಲ್ಲಿ ಭಾರತೀಯ ಪ್ರತಿನಿಧಿಯಾಗಿ ಇವರು ಸೇವೆಸಲ್ಲಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT