ನವದೆಹಲಿ: ಹಿರಿಯ ಐಎಫ್ಎಸ್ ಅಧಿಕಾರಿ ಇಂದ್ರಮಣಿ ಪಾಂಡೆ ಅವರನ್ನು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿಯಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಈ ಸಂಬಂಧ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಆದೇಶ ಹೊರಡಿಸಿದೆ. 1990ರ ಸಾಲಿನ ಐಎಫ್ಎಸ್ ಅಧಿಕಾರಿಯಾಗಿರುವ ಇಂದ್ರಮಣಿ ಪಾಂಡೆ 2015ರಲ್ಲಿ ಓಮನ್ನಲ್ಲಿ ಭಾರತೀಯ ರಾಯಭಾರಿಯಾಗಿದ್ದರು. ಅಲ್ಲದೆ, ಪ್ಯಾರಿಸ್ನಲ್ಲಿ ಭಾರತದ ವಿದೇಶಾಂಗ ವ್ಯವಹಾರಗಳ ಅಧಿಕಾರಿಯಾಗಿಯೂ ಸೇವೆಸಲ್ಲಿಸಿದ್ದಾರೆ.
ಜಿನೇವಾದಲ್ಲಿ ಕೇಂದ್ರ ಕಚೇರಿ ಹೊಂದಿರುವ ವಿಶ್ವಸಂಸ್ಥೆಯಲ್ಲಿ ಭಾರತೀಯ ಪ್ರತಿನಿಧಿಯಾಗಿ ಇವರು ಸೇವೆಸಲ್ಲಿಸಲಿದ್ದಾರೆ.
India Foreign Service officer lndra Mani Pandey has been appointed as the next Ambassador/Permanent Representative of India to the United Nations and other International Organisations in Geneva: Ministry of External Affairs