ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೈಪುರ | ಸಾರಿಸ್ಕಾ ಅಭಯಾರಣ್ಯದಲ್ಲಿ ಗಾಯಗೊಂಡಿದ್ದ ಹುಲಿ ಸಾವು

Last Updated 9 ಜೂನ್ 2019, 6:34 IST
ಅಕ್ಷರ ಗಾತ್ರ

ಜೈಪುರ:ರಾಜಸ್ಥಾನದ ಅಲ್ವಾರ್‌ ಜಿಲ್ಲೆಯ ಸಾರಿಸ್ಕಾ ಹುಲಿ ಅಭಯಾರಣ್ಯದಲ್ಲಿ ಗಾಯಗೊಂಡಿದ್ದ ಹುಲಿ ಶನಿವಾರ ಮೃತಪಟ್ಟಿದೆ. ಆದರೆ, ಹುಲಿಯ ಸಾವಿಗೆ ನಿರ್ದಿಷ್ಟಕಾರಣ ತಿಳಿದುಬಂದಿಲ್ಲ.

ಕಾಲಿಗೆ ಗಾಯಗೊಂಡಿದ್ದ ಹುಲಿಯನ್ನು ಶಸ್ತ್ರ ಚಿಕಿತ್ಸೆಗೆಒಳಪಡಿಸಲಾಗಿತ್ತು. ಗಾಯದಿಂದ ಚೇತರಿಸಿಕೊಂಡಹುಲಿಯು ಸುಮಾರು ಎರಡೂವರೆ ಕಿಲೋಮೀಟರ್‌ ದೂರ ಕ್ರಮಿಸಿಕುಸಿದು ಬಿದ್ದು ಮೃತಪಟ್ಟಿದೆ.

ಗಂಡು ಹುಲಿ ಸುಮಾರು7ರಿಂದ8 ವರ್ಷ ವಯಸ್ಸಿನದು. ಈ ಹುಲಿಯನ್ನು ರಣತಂಬೂರ್ ರಾಷ್ಟ್ರೀಯ ಉದ್ಯಾನದಿಂದ ಏಪ್ರಿಲ್‌ನಲ್ಲಿ ಸ್ಥಳಾಂತರಿಸಲಾಗಿತ್ತು ಎಂದು ಅಭಯಾರಣ್ಯದ ಉನ್ನತ ಅಧಿಕಾರಿಗಳುಸ್ಪಷ್ಟಪಡಿಸಿದ್ದಾರೆ.

ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಅಧಿಕಾರಿಗಳಉಪಸ್ಥಿತಿಯಲ್ಲಿ ಹುಲಿಯ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT