ಉಡುಪಿ: ಮಂಗಳೂರುಪೊಲೀಸರಿಗೆ ಅಂತರರಾಷ್ಟ್ರೀಯ ಬೆದರಿಕೆ ಕರೆಗಳು ಬರುತ್ತಿದ್ದು, ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಕೃಷ್ಣಮಠದ ಪಾರ್ಕಿಂಗ್ ಪ್ರದೇಶದಲ್ಲಿ ಬುಧವಾರ ಶೌಚಾಲಯಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ವಿದೇಶಗಳಿಂದ ಹಾಗೂ ಸ್ಥಳೀಯವಾಗಿ ಬಂದಿರುವ ಬೆದರಿಕೆ ಕರೆಗಳ ತನಿಖೆ ಆರಂಭವಾಗಿದೆ’ ಎಂದರು.
ಈಚೆಗೆ ಕೇರಳದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕಾರಿಗೆ ಅಡ್ಡಿಪಡಿಸಿದ್ದು ಖಂಡನೀಯ. ಈ ಘಟನೆಗೆ ಪ್ರತಿಯಾಗಿ ಬೆಂಗಳೂರಿನಲ್ಲಿ ಕಮ್ಯುನಿಸ್ಟ್ ಕಚೇರಿ ಮೇಲೆ ದಾಳಿ ನಡೆಸಿದ್ದರೆ, ತನಿಖೆ ನಡೆಸಿ ಕ್ರಮಕೈಗೊಳ್ಳಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.