ಆನಾರೋಗ್ಯದ ನಿಮಿತ್ತ ಮಧ್ಯಂತರ ಜಾಮೀನು ಮಂಜೂರು ಮಾಡುವಂತೆ ಕೋರಿ ಚಿದಂಬರಂ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುರೇಶ್ ಕೈಟ್ ಅವರು, ‘ಜೈಲಿನಲ್ಲಿ ಶುದ್ಧ ಮತ್ತು ನೈರ್ಮಲ್ಯದ ವಾತಾವರಣ ಕಾಯ್ದುಕೊಳ್ಳಬೇಕು. ಅರ್ಜಿದಾರರಿಗೆ ಮನೆಯಲ್ಲಿ ಬೇಯಿಸಿದ ಆಹಾರ, ಬಾಟಲ್ ನೀರು ಹಾಗೂ ಸೊಳ್ಳೆ ಪರದೆ ಬಳಸಲು ಅವಕಾಶ ನೀಡಬೇಕು’ ಎಂದು ತಿಹಾರ್ ಜೈಲಿನ ಸೂಪರಿಂಟೆಂಡೆಂಟ್ಗೆ ನಿರ್ದೇಶಿಸಿದರು.