ಚಿದಂಬರಂ ಬಂಧನಕ್ಕೆ ಅನುಮತಿ ಕೋರಿಇ.ಡಿ ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ್ದ ದೆಹಲಿ ಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ಇ.ಡಿ ಪರ ವಾದ ಮಂಡಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ‘ಚಿದಂಬರಂ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವುದು ಅಗತ್ಯ ಎಂದು ಸುಪ್ರೀಂ ಕೋರ್ಟ್ ಕೂಡಾ ಅಭಿಪ್ರಾಯಪಟ್ಟಿದೆ’ ಎಂದು ಗಮನಕ್ಕೆ ತಂದಿದ್ದರು. ಹಣ ವರ್ಗಾವಣೆ ಆರೋಪ ಪ್ರತ್ಯೇಕ ಪ್ರಕರಣ ಎಂದು ಪ್ರತಿಪಾದಿಸಿದ್ದ ಅವರು, ಚಿದಂಬರಂ ಅವರನ್ನು ಬಂಧಿಸಲು ಅನುಮತಿ ಹಾಗೂ ತಮ್ಮ ವಶಕ್ಕೆ ನೀಡಬೇಕು ಎಂದು ಕೋರಿ ಅರ್ಜಿಯನ್ನು ಸಲ್ಲಿಸಿದ್ದರು.