ನವದೆಹಲಿ:ಐಎನ್ಎಕ್ಸ್ ಮೀಡಿಯಾ ಪ್ರಕರಣದ ಸಂಬಂಧ, ಕಾಂಗ್ರೆಸ್ನ ಹಿರಿಯ ನಾಯಕ ಪಿ.ಚಿದಂಬರಂ ಅವರನ್ನು ಬಂಧಿಸ ದಂತೆ ಇರುವ ಮಧ್ಯಂತರ ತಡೆಯಾಜ್ಞೆ ಅವಧಿಯನ್ನು ದೆಹಲಿ ಹೈಕೋರ್ಟ್ ಜನವರಿ 15ರವರೆಗೆ ವಿಸ್ತರಿಸಿದೆ.
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಗುರುವಾರ ಲಭ್ಯವಿಲ್ಲದೆ ಇದ್ದುದರಿಂದ ನ್ಯಾಯಮೂರ್ತಿ ಎ.ಕೆ. ಪಾಠಕ್ ಪ್ರಕರಣದ ಮುಂದಿನ ವಿಚಾರಣೆಯನ್ನು ಜನವರಿಗೆ ಮುಂದೂಡಿದರು.