ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಬಿಐಗೆ ದೆಹಲಿ ಹೈಕೋರ್ಟ್‌ ನೋಟಿಸ್‌

ಐಎನ್‌ಎಕ್ಸ್‌ ಮೀಡಿಯಾ ಹಗರಣ: ಚಿದಂಬರಂ ಜಾಮೀನು ಅರ್ಜಿ
Last Updated 12 ಸೆಪ್ಟೆಂಬರ್ 2019, 20:00 IST
ಅಕ್ಷರ ಗಾತ್ರ

ನವದೆಹಲಿ : ಐಎನ್‌ಎಕ್ಸ್‌ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಕಾಂಗ್ರೆಸ್‌ ಮುಖಂಡ ಪಿ.ಚಿದಂಬರಂ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್‌, ಈ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಸಿಬಿಐಗೆ ಗುರುವಾರ ನೋಟಿಸ್‌ ಜಾರಿ ಮಾಡಿದೆ.

ಇದೊಂದು ರಾಜಕೀಯ ದ್ವೇಷದಿಂದ ಕೂಡಿರುವ ಪ್ರಕರಣವಾಗಿದ್ದು, ಜಾಮೀನು ನೀಡಬೇಕು ಎಂದು ಚಿದಂಬರಂ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುರೇಶ್‌ ಕೈತ್‌ ಅವರು, 7 ದಿನಗಳೊಳಗೆ ಪ್ರಕರಣದ ಸ್ಥಿತಿಗತಿಯ ವರದಿಯನ್ನು ಸಲ್ಲಿಸಬೇಕು ಎಂದು ಸಿಬಿಐಗೆ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT