ಚಿದಂಬರಂ ಅವರಿಗೆ ಜಾಮೀನು ನೀಡಿದಲ್ಲಿ ಅವರು, ಪ್ರಕರಣದ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದನ್ನು ಅಲ್ಲಗಳೆಯಲಾಗದು. ಕಾಂಗ್ರೆಸ್ನಲ್ಲಿ ಪ್ರಭಾವಿ ರಾಜಕಾರಣಿಯಾಗಿರುವ ಚಿದಂಬರಂ ಗೃಹ ಮತ್ತು ಹಣಕಾಸು ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೆ ಅವರೀಗ ಹಾಲಿ ಸಂಸತ್ ಸದಸ್ಯರೂ ಮತ್ತು ದೀರ್ಘಕಾಲದಿಂದ ವಕೀಲರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ನ್ಯಾಯಮೂರ್ತಿ ಸುರೇಶ್ ಕೈತ್ ಅಭಿಪ್ರಾಯಪಟ್ಟಿದ್ದರು.