ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ತಿ ಚಿದಂಬರಂಗೆ ವಿದೇಶಕ್ಕೆ ತೆರಳಲು ಅನುಮತಿ ನೀಡಿದ ಸುಪ್ರೀಂ

₹10 ಕೋಟಿ ಠೇವಣಿ ಇರಿಸುವಂತೆ ಸೂಚನೆ
Last Updated 7 ಮೇ 2019, 13:13 IST
ಅಕ್ಷರ ಗಾತ್ರ

ನವದೆಹಲಿ: ಏರ್‌ಸೆಲ್–ಮ್ಯಾಕ್ಸಿಸ್ ಹಗರಣ ಸಂಬಂಧ ತನಿಖೆ ಎದುರಿಸುತ್ತಿರುವ ಕಾರ್ತಿ ಚಿದಂಬರಂಗೆ ಮೇ ಮತ್ತು ಜೂನ್ ತಿಂಗಳಲ್ಲಿ ವಿದೇಶ ಪ್ರವಾಸ ಕೈಗೊಳ್ಳಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

ಅಮೆರಿಕ, ಜರ್ಮನಿ, ಸ್ಪೈನ್‌ ದೇಶಗಳಿಗೆ ತೆರಳಲು ಅನುವು ಮಾಡಿಕೊಟ್ಟಸುಪ್ರೀಂ, ₹10 ಕೋಟಿ ಠೇವಣಿ ಇರಿಸುವಂತೆ ಹೇಳಿದೆ.

ಮುಖ್ಯ ನ್ಯಾಯಾಮೂರ್ತಿಗಳಾದ ರಂಜನ್ ಗೊಗೊಯಿ ಹಾಗೂ ದೀಪಕ್ ಮಿಶ್ರಾ ನೇತೃತ್ವದ ಪೀಠ ಈ ಆದೇಶ ಹೊರಡಿಸಿದ್ದು, ಈ ಹಿಂದೆ ವಿಧಿಸಿದ್ದ ನಿಯಮಗಳು ಈಗಲೂ ಅನ್ವಯವಾಗಲಿದೆ ಎಂದು ಹೇಳಿದೆ.

ಜೊತೆಗೆ ಕೇಂದ್ರ ಹಣಕಾಸು ಮಾಜಿ ಸಚಿವ ಚಿದಂಬರಂ ಹಾಗೂ ಪುತ್ರ ಕಾರ್ತಿ ಅವರನ್ನು ಬಂಧಿಸದಂತೆ ನೀಡಿರುವ ಮಧ್ಯಂತರ ರಕ್ಷಣೆಯನ್ನು ವಿಶೇಷ ನ್ಯಾಯಾಲಯ ಮೇ 30ರವರೆಗೆ ಮುಂದುವರಿಸಿ ಆದೇಶ ಹೊರಡಿಸಿತ್ತು.

ಇದನ್ನೂ ಓದಿ: ಬಂಧನದ ಭೀತಿಯಿಂದ ಕಾರ್ತಿ, ಚಿದಂಬರಂ ನಿರಾಳ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT