ನವದೆಹಲಿ: ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಮಹಾ ನಿರ್ದೇಶಕರಾಗಿ ಐಪಿಎಸ್ ಅಧಿಕಾರಿ ಆನಂದ್ ಪ್ರಕಾಶ್ ಮಹೇಶ್ವರಿ ಬುಧವಾರ ಅಧಿಕಾರ ಸ್ವೀಕರಿಸಿದರು.
ಉತ್ತರ ಪ್ರದೇಶ ಕೇಡರ್ನ 1984ರ ತಂಡದ ಅಧಿಕಾರಿಯಾಗಿರುವ ಮಹೇಶ್ವರಿ ಅವರಿಗೆ ಭಾರತ–ಟಿಬೆಟನ್ ಗಡಿ ಪೊಲೀಸ್ ಪಡೆಯ (ಐಟಿಬಿಪಿ) ಮಹಾನಿರ್ದೇಶಕ ಎಸ್.ಎಸ್. ದೇಸ್ವಾಲ್ ಅಧಿಕಾರ ಹಸ್ತಾಂತರಿಸಿದರು.