ಕೋಲ್ಕತ್ತ: ಕೇಂದ್ರ ಸರ್ಕಾರ ನೀತಿ ನಿರೂಪಿಸುವಾಗ ಜನರ ಭಾವನೆಗಳನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂದು ಮಣಿಪುರದ ಮಾನವ ಹಕ್ಕುಗಳ ಕಾರ್ಯಕರ್ತೆ ಇರೋಮ್ ಚಾನು ಶರ್ಮಿಳಾ ಟೀಕಿಸಿದ್ದಾರೆ.
ಮೋದಿ ನೇತೃತ್ವದ ಸರ್ಕಾರ ತನ್ನ ವೈಯಕ್ತಿಕ ನಂಬುಗೆಗೆ ಅನುಗುಣವಾಗಿ ಎಲ್ಲವನ್ನೂ ನಿಯಂತ್ರಣ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ದೇಶದಲ್ಲಿ ಬದಲಾವಣೆ ತರಬೇಕಾಗಿದೆ. ಅದನ್ನು ಗಮನದಲ್ಲಿ ಇಟ್ಟುಕೊಂಡು ಮತ ಚಲಾಯಿಸುವಂತೆ ಅವರು ಜನರಲ್ಲಿ ಮನವಿ ಮಾಡಿದ್ದಾರೆ.