ಪಕ್ಷಕ್ಕೆ ಹೊಸ ಅಧ್ಯಕ್ಷರನ್ನು ಹುಡುಕುವಲ್ಲಿ ಹಿರಿಯ ನಾಯಕರು ವಿಫಲರಾಗಿದ್ದಾರೆ ಎಂದೂ ಸಂದೀಪ್ ಆರೋಪಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಪಕ್ಷದ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ, ‘ಅಧ್ಯಕ್ಷ ಸ್ಥಾನದ ಬಗ್ಗೆ ಸಾರ್ವಜನಿಕವಾಗಿ ಹೇಳಿಕೆ ನೀಡುವ ಮುನ್ನ ಸಿಡಬ್ಲ್ಯೂಸಿಯ ನಿರ್ಣಯಗಳನ್ನು ಓದಬೇಕು’ ಎಂದು ಸಲಹೆ ನೀಡಿದ್ದಾರೆ.