<p><strong>ನವದೆಹಲಿ:</strong> ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರೇ ಮತ್ತೆ ಆಯ್ಕೆಯಾಗುವುದು ಬಹುತೇಕ ನಿಚ್ಚಳವಾಗಿದೆ.</p>.<p>‘ರಾಹುಲ್ ಅವರು ಹಾಲಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಉತ್ತರಾಧಿಕಾರಿಯಾಗುವುದು ಖಚಿತ. ಪಕ್ಷದ ಬಹುತೇಕ ನಾಯಕರು ಮತ್ತು ಕಾರ್ಯಕರ್ತರು ರಾಹುಲ್ ಅವರೇ ಅಧ್ಯಕ್ಷರಾಗಬೇಕು ಎಂದು ಬಯಸುತ್ತಿದ್ದಾರೆ. ಅವರೊಬ್ಬರೇ ಅಭ್ಯರ್ಥಿಯಾಗುವುದರಿಂದ ಚುನಾವಣೆ ನಡೆಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಮೂಲಗಳು ತಿಳಿಸಿವೆ.</p>.<p>ಏಪ್ರಿಲ್ನಲ್ಲಿ ನಡೆಯಲಿರುವ ಪಕ್ಷದ ಅಧಿವೇಶನದಲ್ಲಿ ರಾಹುಲ್ ಗಾಂಧಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡುವ ನಿರೀಕ್ಷೆ ಇದೆ.</p>.<p class="Subhead"><strong>ಚುನಾವಣೆ ನಡೆಯಲಿ: </strong>ಕಾರ್ಯಕರ್ತರಲ್ಲಿ ಶಕ್ತಿ ತುಂಬಲು ಹಾಗೂ ಮತದಾರರಿಗೆ ಸ್ಫೂರ್ತಿ ನೀಡಲು ಪಕ್ಷದ ನಾಯಕತ್ವ ಸ್ಥಾನಕ್ಕೆ ಚುನಾವಣೆ ನಡೆಸಬೇಕು ಎಂದು ಸಂಸದ ಶಶಿ ತರೂರ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು ಒತ್ತಾಯಿಸಿದ್ದಾರೆ.</p>.<p>‘ನಾಯಕತ್ವ ಸ್ಥಾನಕ್ಕೆ ಆಯ್ಕೆ ನಡೆಯದಿರುವುದೇ ಪಕ್ಷ ಎದುರಿಸುವ ಪ್ರಮುಖ ಸವಾಲು’ ಎಂದು ಈಚೆಗೆ ಕಾಂಗ್ರೆಸ್ನ ಮಾಜಿ ಸಂಸದ ಸಂದೀಪ್ ದೀಕ್ಷಿತ್ ಹೇಳಿದ್ದರು. ಇದಕ್ಕೆ ಬೆಂಬಲ ಸೂಚಿಸಿ ತರೂರ್ ಅವರು ಪಕ್ಷಕ್ಕೆ ಮನವಿ ಮಾಡಿದ್ದಾರೆ.</p>.<p>‘ಸಂದೀಪ್ ಅವರು ಬಹಿರಂಗವಾಗಿ ಹೇಳಿರುವ ವಿಚಾರವನ್ನೇ ದೇಶದಾದ್ಯಂತ ಪಕ್ಷದ ಹಲವು ನಾಯಕರು ಖಾಸಗಿಯಾಗಿ ಹೇಳುತ್ತಿದ್ದಾರೆ. ಇವರಲ್ಲಿ ಹಲವರು ಪಕ್ಷದ ಜವಾಬ್ದಾರಿಯುತ ಸ್ಥಾನದಲ್ಲಿರುವವರು’ ಎಂದು ತರೂರ್ ಅವರು ಟ್ವೀಟ್ ಮಾಡಿದ್ದಾರೆ.</p>.<p>ಪಕ್ಷಕ್ಕೆ ಹೊಸ ಅಧ್ಯಕ್ಷರನ್ನು ಹುಡುಕುವಲ್ಲಿ ಹಿರಿಯ ನಾಯಕರು ವಿಫಲರಾಗಿದ್ದಾರೆ ಎಂದೂ ಸಂದೀಪ್ ಆರೋಪಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಪಕ್ಷದ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ, ‘ಅಧ್ಯಕ್ಷ ಸ್ಥಾನದ ಬಗ್ಗೆ ಸಾರ್ವಜನಿಕವಾಗಿ ಹೇಳಿಕೆ ನೀಡುವ ಮುನ್ನ ಸಿಡಬ್ಲ್ಯೂಸಿಯ ನಿರ್ಣಯಗಳನ್ನು ಓದಬೇಕು’ ಎಂದು ಸಲಹೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರೇ ಮತ್ತೆ ಆಯ್ಕೆಯಾಗುವುದು ಬಹುತೇಕ ನಿಚ್ಚಳವಾಗಿದೆ.</p>.<p>‘ರಾಹುಲ್ ಅವರು ಹಾಲಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಉತ್ತರಾಧಿಕಾರಿಯಾಗುವುದು ಖಚಿತ. ಪಕ್ಷದ ಬಹುತೇಕ ನಾಯಕರು ಮತ್ತು ಕಾರ್ಯಕರ್ತರು ರಾಹುಲ್ ಅವರೇ ಅಧ್ಯಕ್ಷರಾಗಬೇಕು ಎಂದು ಬಯಸುತ್ತಿದ್ದಾರೆ. ಅವರೊಬ್ಬರೇ ಅಭ್ಯರ್ಥಿಯಾಗುವುದರಿಂದ ಚುನಾವಣೆ ನಡೆಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಮೂಲಗಳು ತಿಳಿಸಿವೆ.</p>.<p>ಏಪ್ರಿಲ್ನಲ್ಲಿ ನಡೆಯಲಿರುವ ಪಕ್ಷದ ಅಧಿವೇಶನದಲ್ಲಿ ರಾಹುಲ್ ಗಾಂಧಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡುವ ನಿರೀಕ್ಷೆ ಇದೆ.</p>.<p class="Subhead"><strong>ಚುನಾವಣೆ ನಡೆಯಲಿ: </strong>ಕಾರ್ಯಕರ್ತರಲ್ಲಿ ಶಕ್ತಿ ತುಂಬಲು ಹಾಗೂ ಮತದಾರರಿಗೆ ಸ್ಫೂರ್ತಿ ನೀಡಲು ಪಕ್ಷದ ನಾಯಕತ್ವ ಸ್ಥಾನಕ್ಕೆ ಚುನಾವಣೆ ನಡೆಸಬೇಕು ಎಂದು ಸಂಸದ ಶಶಿ ತರೂರ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು ಒತ್ತಾಯಿಸಿದ್ದಾರೆ.</p>.<p>‘ನಾಯಕತ್ವ ಸ್ಥಾನಕ್ಕೆ ಆಯ್ಕೆ ನಡೆಯದಿರುವುದೇ ಪಕ್ಷ ಎದುರಿಸುವ ಪ್ರಮುಖ ಸವಾಲು’ ಎಂದು ಈಚೆಗೆ ಕಾಂಗ್ರೆಸ್ನ ಮಾಜಿ ಸಂಸದ ಸಂದೀಪ್ ದೀಕ್ಷಿತ್ ಹೇಳಿದ್ದರು. ಇದಕ್ಕೆ ಬೆಂಬಲ ಸೂಚಿಸಿ ತರೂರ್ ಅವರು ಪಕ್ಷಕ್ಕೆ ಮನವಿ ಮಾಡಿದ್ದಾರೆ.</p>.<p>‘ಸಂದೀಪ್ ಅವರು ಬಹಿರಂಗವಾಗಿ ಹೇಳಿರುವ ವಿಚಾರವನ್ನೇ ದೇಶದಾದ್ಯಂತ ಪಕ್ಷದ ಹಲವು ನಾಯಕರು ಖಾಸಗಿಯಾಗಿ ಹೇಳುತ್ತಿದ್ದಾರೆ. ಇವರಲ್ಲಿ ಹಲವರು ಪಕ್ಷದ ಜವಾಬ್ದಾರಿಯುತ ಸ್ಥಾನದಲ್ಲಿರುವವರು’ ಎಂದು ತರೂರ್ ಅವರು ಟ್ವೀಟ್ ಮಾಡಿದ್ದಾರೆ.</p>.<p>ಪಕ್ಷಕ್ಕೆ ಹೊಸ ಅಧ್ಯಕ್ಷರನ್ನು ಹುಡುಕುವಲ್ಲಿ ಹಿರಿಯ ನಾಯಕರು ವಿಫಲರಾಗಿದ್ದಾರೆ ಎಂದೂ ಸಂದೀಪ್ ಆರೋಪಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಪಕ್ಷದ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ, ‘ಅಧ್ಯಕ್ಷ ಸ್ಥಾನದ ಬಗ್ಗೆ ಸಾರ್ವಜನಿಕವಾಗಿ ಹೇಳಿಕೆ ನೀಡುವ ಮುನ್ನ ಸಿಡಬ್ಲ್ಯೂಸಿಯ ನಿರ್ಣಯಗಳನ್ನು ಓದಬೇಕು’ ಎಂದು ಸಲಹೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>