ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಂಜಾರ, ಅಮಿನ್‌ ನಿರಾಳ

ಇಶ್ರತ್‌ ಜಹಾಂ ನಕಲಿ ಎನ್‌ಕೌಂಟರ್‌ ಪ್ರಕರಣ
Last Updated 2 ಮೇ 2019, 20:00 IST
ಅಕ್ಷರ ಗಾತ್ರ

ಅಹಮದಾಬಾದ್‌:ಇಷ್ರತ್‌ ಜಹಾಂ ನಕಲಿ ಎನ್‌ಕೌಂಟರ್‌ ಪ್ರಕರಣದಲ್ಲಿ ಮಾಜಿ ಪೊಲೀಸ್‌ ಅಧಿಕಾರಿಗಳಾದ ಡಿ.ಜಿ. ವಂಜಾರ ಮತ್ತು ಎನ್.ಕೆ. ಅಮಿನ್‌ ಅವರ ವಿರುದ್ಧದ ಮೊಕದ್ದಮೆಯನ್ನು ಸಿಬಿಐ ವಿಶೇಷ ನ್ಯಾಯಾಲಯ ಗುರುವಾರ ಕೈಬಿಟ್ಟಿದೆ.

ಪ್ರಕರಣದಿಂದ ಬಿಡುಗಡೆ ಕೋರಿ ಈ ಇಬ್ಬರು ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿತು. ಈ ಪ್ರಕರಣಕ್ಕೆ ಬಂಧಿಸಿದಂತೆ ಇಬ್ಬರ ವಿರುದ್ಧ ಮೊಕದ್ದಮೆ ದಾಖಲಿಸಲು ಗುಜರಾತ್‌ ಸರ್ಕಾರ ಅನುಮತಿ ನಿರಾಕರಿಸಿದ್ದರಿಂದ ನ್ಯಾಯಾಲಯ ಈ ಕ್ರಮಕೈಗೊಂಡಿದೆ.

‘ಸರ್ಕಾರವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಕದ್ದಮೆ ದಾಖಲಿಸಲು ಈ ಅಧಿಕಾರಿಗಳ ಹೆಸರನ್ನು ಕೈಬಿಡಲಾಗಿದೆ. ಹೀಗಾಗಿ, ಅವರ ವಿರುದ್ಧ ವಿಚಾರಣೆ ನಡೆಸುವುದನ್ನೂ ಕೈಬಿಡಲಾಗಿದೆ’ ಎಂದು ಸಿಬಿಐ ವಿಶೇಷ ನ್ಯಾಯಾಲಯ ನ್ಯಾಯಮೂರ್ತಿ ಜೆ.ಕೆ. ಪಾಂಡ್ಯ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT