‘ಈ ವಿಚಾರವನ್ನು ನಾವು ನಿರ್ಧರಿಸಬೇಕೇ ಅಥವಾ ಹೈಕೋರ್ಟ್ಗಳು ತೀರ್ಮಾನಿಸುವವೇ ಎಂಬ ಬಗ್ಗೆ ಈಗಲೇ ಏನನ್ನೂ ಹೇಳಲಾಗದು. ನಾವೀಗ ದೂರಿನ ವಿವರಗಳ ಕುರಿತು ಮಾತನಾಡುವುದಿಲ್ಲ. ‘ಮದ್ರಾಸ್, ಬಾಂಬೆ ಹಾಗೂ ಮಧ್ಯಪ್ರದೇಶ ಹೈಕೋರ್ಟ್ಗಳಲ್ಲಿರುವ ಎಲ್ಲಾ ಪ್ರಕರಣಗಳನ್ನು ಸುಪ್ರೀಂ ಕೋರ್ಟ್ಗೆ ವರ್ಗಾವಣೆ ಮಾಡಬೇಕು’ ಎಂಬ ಫೇಸ್ಬುಕ್ ಸಂಸ್ಥೆಯ ಮನವಿಯ ಬಗ್ಗೆ ಮಾತ್ರ ವಿಚಾರಣೆ ನಡೆಸುತ್ತಿದ್ದೇವೆ’ ಎಂದು ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ ಹಾಗೂ ಅನಿರುದ್ಧ ಬೋಸ್ ಅವರ ಪೀಠ ಹೇಳಿದೆ.