ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಮೂರ್ತಿಗಳ ನಿಂದನೆ: ಬೊಬಡೆ ಆತಂಕ

Last Updated 3 ನವೆಂಬರ್ 2019, 20:20 IST
ಅಕ್ಷರ ಗಾತ್ರ

ನವದೆಹಲಿ: ‘ಸಾಮಾಜಿಕ ಮಾಧ್ಯಮಗಳಲ್ಲಿ ನ್ಯಾಯಮೂರ್ತಿಗಳನ್ನು ನಿಂದೆಗೆ ಗುರಿಮಾಡುವುದನ್ನು ನೋಡಿದರೆ ಆತಂಕವಾಗುತ್ತದೆ. ತಮಗೆ ಕಿರುಕುಳ ನೀಡಲಾಗುತ್ತಿದೆ ಎಂಬ ಭಾವನೆ ಇಂತಹ ನಿಂದೆಯಿಂದ ನ್ಯಾಯಮೂರ್ತಿಗಳಲ್ಲಿ ಮೂಡುತ್ತದೆ’ ಎಂದು ನ್ಯಾಯಮೂರ್ತಿ ಎಸ್‌.ಎ. ಬೊಬಡೆ ಹೇಳಿದರು.

ಬೊಬಡೆ ಅವರು ಇದೇ 18ರಂದು ಸುಪ್ರೀಂ ಕೋರ್ಟ್‌ನ 47ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

‘ಅನಿಯಂತ್ರಿತ ಟೀಕೆಯು ನ್ಯಾಯಮೂರ್ತಿಗಳ ಮೇಲಿನ ವಿಶ್ವಾಸಕ್ಕೆ ಧಕ್ಕೆ ಉಂಟುಮಾಡುತ್ತದೆ. ಜೊತೆಗೆ ಅವರ ಆತ್ಮವಿಶ್ವಾಸವನ್ನು ಸಹ ಗಾಸಿಗೊಳಿಸುತ್ತದೆ. ಸಾಮಾಜಿಕ ಮಾಧ್ಯಮವೂ ಸೇರಿದಂತೆ ವಿವಿಧ ವೇದಿಕೆಗಳಲ್ಲಿ ಯಾವುದೇ ತೀರ್ಪನ್ನು ವಿಮರ್ಶಿಸುವ ಬದಲು ಅದನ್ನು ನೀಡಿದ ನ್ಯಾಯಮೂರ್ತಿಗಳನ್ನು ವಿಮರ್ಶೆಗೆ ಒಳಪಡಿಸುವುದು ಮಾನನಷ್ಟಕ್ಕೆ ಸಮನಾದ ಅಪರಾಧ’ ಎಂದು ಸುದ್ದಿಸಂಸ್ಥೆಗೆ ಭಾನುವಾರ ನೀಡಿದ ಸಂದರ್ಶನದಲ್ಲಿ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT