ಸ್ಮಾರಕವಾಗಲಿದೆ ಜಯಲಲಿತಾ ನಿವಾಸ: ಸ್ವಾಧೀನ ಪ್ರಕ್ರಿಯೆ ಆರಂಭ

ಚೆನ್ನೈ: ಮಾಜಿ ಮುಖ್ಯಮಂತ್ರಿ ದಿ. ಜೆ.ಜಯಲಲಿತಾ ಅವರ ನಿವಾಸವನ್ನು ಸ್ಮಾರಕವಾಗಿ ಪರಿವರ್ತಿಸುವ ಪ್ರಕ್ರಿಯೆಗೆ ತಮಿಳುನಾಡು ಸರ್ಕಾರ ಚಾಲನೆ ನೀಡಿದೆ.
ಜಯಲಲಿತಾ ಅವರ ಮೂರಂತಸ್ತಿನ ‘ವೇದ ನಿಲಯಂ’ ನಿವಾಸವನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಮರಿನಾ ಬೀಚ್ನಲ್ಲಿ ಜಯಲಲಿತಾ ಸಮಾಧಿ ಇರುವಲ್ಲಿ ₹ 50 ಕೋಟಿ ವೆಚ್ಚದಲ್ಲಿ ಈಗಾಗಲೇ ಸ್ಮಾರಕ ನಿರ್ಮಿಸಲಾಗುತ್ತಿದೆ.
ಪೋಸ್ ಗಾರ್ಡನ್ ಪ್ರದೇಶದಲ್ಲಿರುವ ಮನೆಯನ್ನು ಸಾರ್ವಜನಿಕ ಉದ್ದೇಶಕ್ಕಾಗಿ ಸ್ವಾಧೀನಪಡಿಸಿಕೊಳ್ಳುವ ಬಗ್ಗೆ ಚೆನ್ನೈ ಆಡಳಿತ ಬುಧವಾರ ಅಧಿಸೂಚನೆ ಹೊರಡಿಸಿದೆ. ಈ ನಿವಾಸದ ಉತ್ತರಾಧಿಕಾರಿ ಯಾರೆಂಬುದು ಇನ್ನೂ ದೃಢಪಟ್ಟಿಲ್ಲ ಎಂದೂ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.