ನವದೆಹಲಿ: ಜಮ್ಮು–ಕಾಶ್ಮೀರದ ಅನಂತನಾಗ್ದಲ್ಲಿ ಉಗ್ರರು ನಡೆಸಿದ್ದ ಆತ್ಮಾಹುತಿ ದಾಳಿಯಲ್ಲಿ ಗಾಯಗೊಂಡಿದ್ದ ಪೊಲೀಸ್ ಅಧಿಕಾರಿ ಅರ್ಷದ್ ಅಹ್ಮದ್ ಖಾನ್ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಕೊನೆಯುಸಿರೆಳೆದಿದ್ದಾರೆ.
ಬುಧವಾರ ನಡೆದ ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದ ಅರ್ಷದ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಭಾನುವಾರ ಬೆಳಿಗ್ಗೆ ಕರೆತರಲಾಗಿತ್ತು. ಆದರೆ, ಅವರ ಆರೋಗ್ಯ ಸ್ಥಿತಿ ಹದಗೆಟ್ಟು, ಮೃತಪಟ್ಟರು ಎಂದು ಸೇನಾ ಮೂಲಗಳು ತಿಳಿಸಿವೆ.
ಈ ದಾಳಿಯಲ್ಲಿ ಸಿಆರ್ಪಿಎಫ್ನ ಐವರು ಯೋಧರು ಹುತಾತ್ಮರಾಗಿದ್ದಾರೆ.