<p><strong>ಅಮರಾವತಿ: </strong>ಆಡಳಿತ ವಿಕೇಂದ್ರೀಕರಣ ಉದ್ದೇಶದಿಂದ ಮೂರು ರಾಜಧಾನಿಗಳನ್ನು ಮಾಡುವ ‘ಆಂಧ್ರ ಪ್ರದೇಶ ವಿಕೇಂದ್ರಿಕರಣ ಮತ್ತು ಎಲ್ಲಾ ಪ್ರದೇಶಗಳ ಸಮಗ್ರ ಅಭಿವೃದ್ಧಿ ಮಸೂದೆ–2020’ ಅನ್ನು ಆಂಧ್ರ ಪ್ರದೇಶದ ವಿಧಾನಸಭೆ ಅಧಿವೇಶನದಲ್ಲಿ ಸೋಮವಾರ ಮಂಡಿಸಲಾಯಿತು.</p>.<p>ಈ ಮಸೂದೆ ಪ್ರಕಾರ ಅಮರಾವತಿಯನ್ನು ಶಾಸಕಾಂಗ ರಾಜಧಾನಿಯನ್ನಾಗಿ, ವಿಶಾಖಪಟ್ಟಣವನ್ನು ಕಾರ್ಯಾಂಗ ರಾಜಧಾನಿಯನ್ನಾಗಿ ಹಾಗೂ ಕರ್ನೂಲ್ ಅನ್ನು ನ್ಯಾಯಾಂಗ ರಾಜಧಾನಿಯನ್ನಾಗಿ ಮಾಡಲು ಉದ್ದೇಶಿಸಲಾಗಿದೆ. ರಾಜ್ಯವನ್ನು ವಿವಿಧ ವಲಯಗಳನ್ನಾಗಿ ವಿಭಾಗಿಸುವುದು, ವಲಯ ಅಭಿವೃದ್ಧಿ ಯೋಜನೆ ಮತ್ತು ಅಭಿವೃದ್ಧಿ ಮಂಡಳಿಗಳ ಸ್ಥಾಪನೆಬಗ್ಗೆಯೂ ಮಸೂದೆಯಲ್ಲಿ ವಿವರಿಸಲಾಗಿದೆ.</p>.<p>ಅಧಿವೇಶನಕ್ಕೂಮುನ್ನ ಜಗನ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕರಡು ಮಸೂದೆ ಅಂಗೀಕಾರಗೊಂಡಿತು. ಜೊತೆಗೆ ರಾಜಧಾನಿಗೆ ಸಂಬಂಧಿಸಿದಂತೆ ಸಚಿವರು ಮತ್ತು ಅಧಿಕಾರಿಗಳನ್ನೊಳಗೊಂಡ ತಜ್ಞರಸಮಿತಿಯ ಶಿಫಾರಸುಗಳಿಗೂ ಸಂಪುಟ ಸಮ್ಮತಿ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ: </strong>ಆಡಳಿತ ವಿಕೇಂದ್ರೀಕರಣ ಉದ್ದೇಶದಿಂದ ಮೂರು ರಾಜಧಾನಿಗಳನ್ನು ಮಾಡುವ ‘ಆಂಧ್ರ ಪ್ರದೇಶ ವಿಕೇಂದ್ರಿಕರಣ ಮತ್ತು ಎಲ್ಲಾ ಪ್ರದೇಶಗಳ ಸಮಗ್ರ ಅಭಿವೃದ್ಧಿ ಮಸೂದೆ–2020’ ಅನ್ನು ಆಂಧ್ರ ಪ್ರದೇಶದ ವಿಧಾನಸಭೆ ಅಧಿವೇಶನದಲ್ಲಿ ಸೋಮವಾರ ಮಂಡಿಸಲಾಯಿತು.</p>.<p>ಈ ಮಸೂದೆ ಪ್ರಕಾರ ಅಮರಾವತಿಯನ್ನು ಶಾಸಕಾಂಗ ರಾಜಧಾನಿಯನ್ನಾಗಿ, ವಿಶಾಖಪಟ್ಟಣವನ್ನು ಕಾರ್ಯಾಂಗ ರಾಜಧಾನಿಯನ್ನಾಗಿ ಹಾಗೂ ಕರ್ನೂಲ್ ಅನ್ನು ನ್ಯಾಯಾಂಗ ರಾಜಧಾನಿಯನ್ನಾಗಿ ಮಾಡಲು ಉದ್ದೇಶಿಸಲಾಗಿದೆ. ರಾಜ್ಯವನ್ನು ವಿವಿಧ ವಲಯಗಳನ್ನಾಗಿ ವಿಭಾಗಿಸುವುದು, ವಲಯ ಅಭಿವೃದ್ಧಿ ಯೋಜನೆ ಮತ್ತು ಅಭಿವೃದ್ಧಿ ಮಂಡಳಿಗಳ ಸ್ಥಾಪನೆಬಗ್ಗೆಯೂ ಮಸೂದೆಯಲ್ಲಿ ವಿವರಿಸಲಾಗಿದೆ.</p>.<p>ಅಧಿವೇಶನಕ್ಕೂಮುನ್ನ ಜಗನ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕರಡು ಮಸೂದೆ ಅಂಗೀಕಾರಗೊಂಡಿತು. ಜೊತೆಗೆ ರಾಜಧಾನಿಗೆ ಸಂಬಂಧಿಸಿದಂತೆ ಸಚಿವರು ಮತ್ತು ಅಧಿಕಾರಿಗಳನ್ನೊಳಗೊಂಡ ತಜ್ಞರಸಮಿತಿಯ ಶಿಫಾರಸುಗಳಿಗೂ ಸಂಪುಟ ಸಮ್ಮತಿ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>