<p><strong>ಹೈದರಾಬಾದ್:</strong> ‘ರಾಜ್ಯಕ್ಕೆ ವಿಶೇಷ ಸ್ಥಾನಮಾನ ಪಡೆಯುವ ಸಂಬಂಧ ರಾಜಕೀಯ ಒತ್ತಡ ಹೇರುವ ಸಲುವಾಗಿ ತೆಲಂಗಾಣ ರಾಷ್ಟ್ರೀಯ ಸಮಿತಿ (ಟಿಆರ್ಎಸ್) ಅಧ್ಯಕ್ಷ ಕೆ.ಚಂದ್ರಶೇಖರ ರಾವ್ ಅವರ ಬೆಂಬಲ ಪಡೆದರೆ ತಪ್ಪೇನಿದೆ’ ಎಂದು ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್ಸಿಪಿ) ಮುಖಂಡ ವೈ.ಎಸ್.ಜಗನ್ಮೋಹನ್ ರೆಡ್ಡಿ ಪ್ರಶ್ನಿಸಿದ್ದಾರೆ.</p>.<p>ತಾಡಪತ್ರಿ ಪಟ್ಟಣದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಆಂಧ್ರಪ್ರದೇಶದಲ್ಲಿ 25 ಹಾಗೂ ತೆಲಂಗಾಣದಲ್ಲಿ 17 ಸೀಟುಗಳಿವೆ. ಈ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳು ಕೈಜೋಡಿಸಿದಲ್ಲಿ ನಮ್ಮ ಹಕ್ಕುಗಳಿಗಾಗಿ ಒಟ್ಟಾಗಿ ಹೋರಾಡಬಹುದು’ ಎಂದು ಹೇಳಿದರು.</p>.<p>‘ಟಿಡಿಪಿ ಬೆಂಬಲಿಸಿದರೆ ಘೋರ ಪರಿಣಾಮ ಎದುರಿಸಬೇಕಾಗುತ್ತದೆ ಎಂಬುದಾಗಿ ವೈಎಸ್ಆರ್ಸಿಪಿ ಬೆದರಿಕೆ ಹಾಕುತ್ತಿದೆ’ ಎಂದು ಟಿಡಿಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜನಸೇನಾ ಪಕ್ಷದ ನಾಯಕ, ನಟ ಪವನ್ ಕಲ್ಯಾಣ್ ಆರೋಪಿಸಿದ್ದಾರೆ.</p>.<p>‘ವೈಎಸ್ಆರ್ಸಿಪಿ ಅಭ್ಯರ್ಥಿಗಳ ಆಯ್ಕೆಯನ್ನು ಹೈದರಾಬಾದ್ನಲ್ಲಿರುವ ತಮ್ಮ ನಿವಾಸ ಪ್ರಗತಿಭವನದಲ್ಲಿ ಕೆ.ಚಂದ್ರಶೇಖರ್ ರಾವ್ ಅಂತಿಮಗೊಳಿಸಿದ್ದಾರೆ. ಟಿಡಿಪಿ ಬಗ್ಗೆ ಒಲವಿರುವವರಿಗೆ ಬ್ಲ್ಯಾಕ್ಮೇಲ್ ಮಾಡಿ, ಅವರು ವೈಎಸ್ಆರ್ಸಿಪಿ ಸೇರುವಂತೆ ಮಾಡಲಾಗುತ್ತಿದೆ’ ಎಂಬ ಆರೋಪಗಳೂ ಕೇಳಿ ಬಂದಿವೆ. ಈ ಆರೋಪಗಳಿಗೆ ತಿರುಗೇಟು ಎಂಬಂತೆ ಜಗನ್ಮೋಹನ್ ರೆಡ್ಡಿ ಮೇಲಿನಂತೆ ಹೇಳಿದ್ದಾರೆ.</p>.<p>‘ಆಂಧ್ರಪ್ರದೇಶದಲ್ಲಿ ಚುನಾವಣೆ ಎದುರಿಸಲು ವೈಎಸ್ಆರ್ ಕಾಂಗ್ರೆಸ್ಗೆ ಕೆ.ಚಂದ್ರಶೇಖರ್ರಾವ್ ₹ 1,000 ಕೋಟಿ ಕಳುಹಿಸಿದ್ದಾರೆ’ ಎಂಬ ತೆಲುಗುದೇಶಂ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಆರೋಪಗಳಿಗೂ ತಿರುಗೇಟು ನೀಡಿರುವ ಜಗನ್ ಮೋಹನ್ರೆಡ್ಡಿ, ‘ಈ ರೀತಿ ಮಾತನಾಡುವುದು ಮುಖ್ಯಮಂತ್ರಿ ಸ್ಥಾನದಲ್ಲಿರುವವರಿಗೆ ಶೋಭಿಸದು’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ‘ರಾಜ್ಯಕ್ಕೆ ವಿಶೇಷ ಸ್ಥಾನಮಾನ ಪಡೆಯುವ ಸಂಬಂಧ ರಾಜಕೀಯ ಒತ್ತಡ ಹೇರುವ ಸಲುವಾಗಿ ತೆಲಂಗಾಣ ರಾಷ್ಟ್ರೀಯ ಸಮಿತಿ (ಟಿಆರ್ಎಸ್) ಅಧ್ಯಕ್ಷ ಕೆ.ಚಂದ್ರಶೇಖರ ರಾವ್ ಅವರ ಬೆಂಬಲ ಪಡೆದರೆ ತಪ್ಪೇನಿದೆ’ ಎಂದು ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್ಸಿಪಿ) ಮುಖಂಡ ವೈ.ಎಸ್.ಜಗನ್ಮೋಹನ್ ರೆಡ್ಡಿ ಪ್ರಶ್ನಿಸಿದ್ದಾರೆ.</p>.<p>ತಾಡಪತ್ರಿ ಪಟ್ಟಣದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಆಂಧ್ರಪ್ರದೇಶದಲ್ಲಿ 25 ಹಾಗೂ ತೆಲಂಗಾಣದಲ್ಲಿ 17 ಸೀಟುಗಳಿವೆ. ಈ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳು ಕೈಜೋಡಿಸಿದಲ್ಲಿ ನಮ್ಮ ಹಕ್ಕುಗಳಿಗಾಗಿ ಒಟ್ಟಾಗಿ ಹೋರಾಡಬಹುದು’ ಎಂದು ಹೇಳಿದರು.</p>.<p>‘ಟಿಡಿಪಿ ಬೆಂಬಲಿಸಿದರೆ ಘೋರ ಪರಿಣಾಮ ಎದುರಿಸಬೇಕಾಗುತ್ತದೆ ಎಂಬುದಾಗಿ ವೈಎಸ್ಆರ್ಸಿಪಿ ಬೆದರಿಕೆ ಹಾಕುತ್ತಿದೆ’ ಎಂದು ಟಿಡಿಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜನಸೇನಾ ಪಕ್ಷದ ನಾಯಕ, ನಟ ಪವನ್ ಕಲ್ಯಾಣ್ ಆರೋಪಿಸಿದ್ದಾರೆ.</p>.<p>‘ವೈಎಸ್ಆರ್ಸಿಪಿ ಅಭ್ಯರ್ಥಿಗಳ ಆಯ್ಕೆಯನ್ನು ಹೈದರಾಬಾದ್ನಲ್ಲಿರುವ ತಮ್ಮ ನಿವಾಸ ಪ್ರಗತಿಭವನದಲ್ಲಿ ಕೆ.ಚಂದ್ರಶೇಖರ್ ರಾವ್ ಅಂತಿಮಗೊಳಿಸಿದ್ದಾರೆ. ಟಿಡಿಪಿ ಬಗ್ಗೆ ಒಲವಿರುವವರಿಗೆ ಬ್ಲ್ಯಾಕ್ಮೇಲ್ ಮಾಡಿ, ಅವರು ವೈಎಸ್ಆರ್ಸಿಪಿ ಸೇರುವಂತೆ ಮಾಡಲಾಗುತ್ತಿದೆ’ ಎಂಬ ಆರೋಪಗಳೂ ಕೇಳಿ ಬಂದಿವೆ. ಈ ಆರೋಪಗಳಿಗೆ ತಿರುಗೇಟು ಎಂಬಂತೆ ಜಗನ್ಮೋಹನ್ ರೆಡ್ಡಿ ಮೇಲಿನಂತೆ ಹೇಳಿದ್ದಾರೆ.</p>.<p>‘ಆಂಧ್ರಪ್ರದೇಶದಲ್ಲಿ ಚುನಾವಣೆ ಎದುರಿಸಲು ವೈಎಸ್ಆರ್ ಕಾಂಗ್ರೆಸ್ಗೆ ಕೆ.ಚಂದ್ರಶೇಖರ್ರಾವ್ ₹ 1,000 ಕೋಟಿ ಕಳುಹಿಸಿದ್ದಾರೆ’ ಎಂಬ ತೆಲುಗುದೇಶಂ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಆರೋಪಗಳಿಗೂ ತಿರುಗೇಟು ನೀಡಿರುವ ಜಗನ್ ಮೋಹನ್ರೆಡ್ಡಿ, ‘ಈ ರೀತಿ ಮಾತನಾಡುವುದು ಮುಖ್ಯಮಂತ್ರಿ ಸ್ಥಾನದಲ್ಲಿರುವವರಿಗೆ ಶೋಭಿಸದು’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>