ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇವು ಹಗರಣ: 16 ಅಪರಾಧಿಗಳಿಗೆ ಜೈಲು ಶಿಕ್ಷೆ

Last Updated 29 ಮೇ 2019, 19:31 IST
ಅಕ್ಷರ ಗಾತ್ರ

ರಾಂಚಿ: ಮೇವು ಹಗರಣದ 16 ಮಂದಿ ಅಪರಾಧಿಗಳಿಗೆ ಮೂರರಿಂದ ನಾಲ್ಕು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ ಆದೇಶ ಹೊರಡಿಸಿದೆ.

1990ರಲ್ಲಿ ಚಾಯಿಬಾಸಾ ಖಜಾನೆಯಿಂದ ₹37 ಕೋಟಿ ಅಕ್ರಮವಾಗಿ ಪಡೆದ ಆರ್‌ಸಿ 20ಎ/96ಪ್ರಕರಣಕ್ಕೆ ಸಂಬಂಧಿಸಿ ಈ ಶಿಕ್ಷೆ ವಿಧಿಸಲಾಗಿದೆ. ಅಪರಾಧಿಗಳಿಗೆ ಜೈಲು ಶಿಕ್ಷೆ ಜತೆಗೆ ₹25,000 ದಿಂದ ₹7 ಲಕ್ಷದವರೆಗೆ ದಂಡ ವಿಧಿಸಲಾಗಿದೆ ಎಂದು ಸರ್ಕಾರಿ ವಕೀಲ ಸಂಜಯ್‌ ಕುಮಾರ್‌ ತಿಳಿಸಿದ್ದಾರೆ.

ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಅಧ್ಯಕ್ಷ ಲಾಲು ಪ್ರಸಾದ್‌ ಸೇರಿ 44 ಅಪರಾಧಿಗಳಿಗೆ 2013ರಲ್ಲಿ ಶಿಕ್ಷೆ ವಿಧಿಸಲಾಗಿದೆ. ಲಾಲು ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಸಲ್ಲಿಸಿದ್ದ ಆರೋಪಪಟ್ಟಿಯಲ್ಲಿ ಕೈಬಿಟ್ಟಿದ್ದ 20 ಮಂದಿ ವಿರುದ್ಧ ಪೂರಕ ಆರೋಪಪಟ್ಟಿಯನ್ನು ಸಿಬಿಐ ಸಲ್ಲಿಸಿತ್ತು. ಚಾಯಿಬಾಸಾ ಖಜಾನೆಯ ಮಾಜಿ ಸಿಬ್ಬಂದಿ ಲಾಲ್‌ ಮೋಹನ್‌ ಗೋಪ್‌, ಭರತ್‌ ನಾರಾಯಣ್‌ ದಾಸ್‌, ಸಹದೇವ್‌ ಪ್ರಸಾದ್‌ ಸೇರಿ 16 ಅಪರಾಧಿಗಳಿಗೆಈಗ ಶಿಕ್ಷೆ ನೀಡಲಾಗಿದೆ. ಉಳಿದ ನಾಲ್ವರಲ್ಲಿ ಒಬ್ಬರು ತಲೆಮರೆಸಿಕೊಂಡಿದ್ದು, ಮೂವರು ನಿಧನರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT