<p><strong>ಶ್ರೀನಗರ :</strong> ನಗರದಲ್ಲಿ ಕೆಲವು ಅಂಗಡಿಗಳು ಬುಧವಾರ ಬೆಳಿಗ್ಗೆ ಬಾಗಿಲುಗಳನ್ನು ತೆರೆದಿದ್ದವು. ಆದರೆ, ಕಾಶ್ಮೀರ ಕಣಿವೆಯಾದ್ಯಂತ ಪ್ರಮುಖ ಮಾರುಕಟ್ಟೆಗಳು ಮತ್ತು ಇತರ ವ್ಯಾಪಾರ- ವಹಿವಾಟು ಸತತ 59ನೇ ದಿನವೂ ಬಂದ್ ಆಗಿವೆ.</p>.<p>ಜಮ್ಮು–ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಶ್ರೀನಗರದಲ್ಲಿ ಜನವಜೀವನ ಸಹಜ ಸ್ಥಿತಿಗೆ ಬಂದಿಲ್ಲ. ಹಂದ್ವಾರ ಮತ್ತು ಕುಪ್ವಾರ ಪ್ರದೇಶಗ ಳನ್ನು ಹೊರತುಪಡಿಸಿ ಕಾಶ್ಮೀರದ ಉಳಿ ದೆಡೆ ಮೊಬೈಲ್ ಸೇವೆ ಬಂದ್ ಆಗಿದೆ.</p>.<p>‘ಮೊಬೈಲ್ ಮತ್ತು ಇಂಟರ್ನೆಟ್ ಸೇವೆಗಳ ದುರ್ಬಳಕೆ ಆಗುವ ಸಾಧ್ಯತೆ ಇದೆ. ದುಷ್ಕರ್ಮಿಗಳು ಈ ಸೇವೆಗಳನ್ನು ಬಳಸಿಕೊಂಡು ಕಣಿವೆಯಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಬಹುದು. ಆದ್ದರಿಂದ ಬಂದ್ ಮಾಡಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಪರಿಸ್ಥಿತಿ ನೋಡಿಕೊಂಡು ಸೂಕ್ತ ಸಮಯದಲ್ಲಿ ಮೊಬೈಲ್ ಮತ್ತು ಇಂಟ ರ್ನೆಟ್ ಸೇವೆಗಳನ್ನು ಪುನಾ ಆರಂಭಿಸಲಾಗುವುದು. ಕಣಿವೆಯಲ್ಲಿ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ’ ಎಂದು ಅವರು ಹೇಳಿದ್ದಾರೆ.</p>.<p>ಜಮ್ಮು ಸಹಜ ಸ್ಥಿತಿಗೆ: ಜಮ್ಮುವಿನಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಬಂದಿದೆ.ಗೃಹ ಬಂಧನದಲ್ಲಿಟ್ಟಿದ್ದ ವಿವಿಧ ರಾಜಕೀಯ ಪಕ್ಷಗಳ ಮುಖಂಡರನ್ನು ಬಿಡುಗಡೆ ಮಾಡಿದ್ದು, ಅವರ ವಿರುದ್ಧ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ ಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಒಪ್ಪಿಗೆ: ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ (ಎನ್ಎಲ್ಯು) ಸ್ಥಾಪಿಸುವ ಮಸೂದೆಗೆ ರಾಜ್ಯಪಾಲ ಸತ್ಯಪಾಲ್ ಮಲಿಕ್ ಮಂಗಳವಾರ ಒಪ್ಪಿಗೆ ನೀಡಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ.</p>.<p>90ರ ದಶಕದ ಮಧ್ಯಭಾಗದಲ್ಲಿ ನಡೆದ ಅಖಿಲ ಭಾರತ ಕಾನೂನು ಸಚಿವರ ಸಮ್ಮೇಳನದಲ್ಲಿ ಈ ಕುರಿತು ನಿರ್ಣಯ ಅಂಗೀಕರಿಸಲಾಗಿತ್ತು. ವೃತ್ತಿ ಪರ ಕಾನೂನು ಶಿಕ್ಷಣದ ಗುಣಮಟ್ಟ ಸುಧಾರಿಸಲು ನ್ಯಾಷನಲ್ ಸ್ಕೂಲ್ ಆಫ್ ಲಾ ಯುನಿವರ್ಸಿಟಿ ಮಾದರಿಯಲ್ಲಿ ಪ್ರತಿ ರಾಜ್ಯದಲ್ಲಿ ಕಾನೂನು ಶಾಲೆ ಸ್ಥಾಪಿಸಲು ನಿರ್ಧರಿಸಲಾಗಿತ್ತು. ಈ ನಿರ್ಣಯದಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್ಎಲ್ ಯು ಸ್ಥಾಪಿಸಲಾಗುತ್ತಿದೆ ಎಂದರು.</p>.<p><strong>‘144 ಬಾಲಾಪರಾಧಿಗಳ ಬಂಧನ’</strong></p>.<p><strong>ನವದೆಹಲಿ:</strong> 370ನೇ ವಿಧಿ ರದ್ದುಪಡಿಸಿದ ನಂತರ 144 ಬಾಲಾಪರಾಧಿಗಳನ್ನು ಬಂಧಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ನಬಾಲಾಪರಾಧಿ ನ್ಯಾಯ ಸಮಿತಿ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.</p>.<p>ಬಂಧಿತರ ಪೈಕಿ 142 ಬಾಲಾಪರಾಧಿಗಳನ್ನು ಬಿಡುಗಡೆ ಮಾಡಲಾಗಿದ್ದು, ಇಬ್ಬರನ್ನು ಬಾಲಗೃಹಕ್ಕೆ ಕಳುಹಿಸಲಾಗಿದೆ ಎಂದು ಸಮಿತಿ ನೀಡಿರುವ ವರದಿಯಲ್ಲಿ ಹೇಳಲಾಗಿದೆ.</p>.<p>ಮಕ್ಕಳ ಹಕ್ಕುಗಳ ಹೋರಾಟಗಾರರಾದಎನಾಕ್ಷಿ ಗಂಗೂಲಿ ಮತ್ತು ಶಾಂತಾ ಸಿನ್ಹಾ ಅವರು ಬಾಲಕರನ್ನು ಬಂಧಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎನ್.ವಿ.ರಮಣ, ಎಂ.ಆರ್.ಶಾ ಮತ್ತು ಬಿ.ಆರ್.ಗವಾಯಿ ಅವರಿದ್ದ ನ್ಯಾಯಪೀಠಕ್ಕೆ ಸಮಿತಿ ವರದಿ ಸಲ್ಲಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ :</strong> ನಗರದಲ್ಲಿ ಕೆಲವು ಅಂಗಡಿಗಳು ಬುಧವಾರ ಬೆಳಿಗ್ಗೆ ಬಾಗಿಲುಗಳನ್ನು ತೆರೆದಿದ್ದವು. ಆದರೆ, ಕಾಶ್ಮೀರ ಕಣಿವೆಯಾದ್ಯಂತ ಪ್ರಮುಖ ಮಾರುಕಟ್ಟೆಗಳು ಮತ್ತು ಇತರ ವ್ಯಾಪಾರ- ವಹಿವಾಟು ಸತತ 59ನೇ ದಿನವೂ ಬಂದ್ ಆಗಿವೆ.</p>.<p>ಜಮ್ಮು–ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಶ್ರೀನಗರದಲ್ಲಿ ಜನವಜೀವನ ಸಹಜ ಸ್ಥಿತಿಗೆ ಬಂದಿಲ್ಲ. ಹಂದ್ವಾರ ಮತ್ತು ಕುಪ್ವಾರ ಪ್ರದೇಶಗ ಳನ್ನು ಹೊರತುಪಡಿಸಿ ಕಾಶ್ಮೀರದ ಉಳಿ ದೆಡೆ ಮೊಬೈಲ್ ಸೇವೆ ಬಂದ್ ಆಗಿದೆ.</p>.<p>‘ಮೊಬೈಲ್ ಮತ್ತು ಇಂಟರ್ನೆಟ್ ಸೇವೆಗಳ ದುರ್ಬಳಕೆ ಆಗುವ ಸಾಧ್ಯತೆ ಇದೆ. ದುಷ್ಕರ್ಮಿಗಳು ಈ ಸೇವೆಗಳನ್ನು ಬಳಸಿಕೊಂಡು ಕಣಿವೆಯಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಬಹುದು. ಆದ್ದರಿಂದ ಬಂದ್ ಮಾಡಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಪರಿಸ್ಥಿತಿ ನೋಡಿಕೊಂಡು ಸೂಕ್ತ ಸಮಯದಲ್ಲಿ ಮೊಬೈಲ್ ಮತ್ತು ಇಂಟ ರ್ನೆಟ್ ಸೇವೆಗಳನ್ನು ಪುನಾ ಆರಂಭಿಸಲಾಗುವುದು. ಕಣಿವೆಯಲ್ಲಿ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ’ ಎಂದು ಅವರು ಹೇಳಿದ್ದಾರೆ.</p>.<p>ಜಮ್ಮು ಸಹಜ ಸ್ಥಿತಿಗೆ: ಜಮ್ಮುವಿನಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಬಂದಿದೆ.ಗೃಹ ಬಂಧನದಲ್ಲಿಟ್ಟಿದ್ದ ವಿವಿಧ ರಾಜಕೀಯ ಪಕ್ಷಗಳ ಮುಖಂಡರನ್ನು ಬಿಡುಗಡೆ ಮಾಡಿದ್ದು, ಅವರ ವಿರುದ್ಧ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ ಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಒಪ್ಪಿಗೆ: ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ (ಎನ್ಎಲ್ಯು) ಸ್ಥಾಪಿಸುವ ಮಸೂದೆಗೆ ರಾಜ್ಯಪಾಲ ಸತ್ಯಪಾಲ್ ಮಲಿಕ್ ಮಂಗಳವಾರ ಒಪ್ಪಿಗೆ ನೀಡಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ.</p>.<p>90ರ ದಶಕದ ಮಧ್ಯಭಾಗದಲ್ಲಿ ನಡೆದ ಅಖಿಲ ಭಾರತ ಕಾನೂನು ಸಚಿವರ ಸಮ್ಮೇಳನದಲ್ಲಿ ಈ ಕುರಿತು ನಿರ್ಣಯ ಅಂಗೀಕರಿಸಲಾಗಿತ್ತು. ವೃತ್ತಿ ಪರ ಕಾನೂನು ಶಿಕ್ಷಣದ ಗುಣಮಟ್ಟ ಸುಧಾರಿಸಲು ನ್ಯಾಷನಲ್ ಸ್ಕೂಲ್ ಆಫ್ ಲಾ ಯುನಿವರ್ಸಿಟಿ ಮಾದರಿಯಲ್ಲಿ ಪ್ರತಿ ರಾಜ್ಯದಲ್ಲಿ ಕಾನೂನು ಶಾಲೆ ಸ್ಥಾಪಿಸಲು ನಿರ್ಧರಿಸಲಾಗಿತ್ತು. ಈ ನಿರ್ಣಯದಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್ಎಲ್ ಯು ಸ್ಥಾಪಿಸಲಾಗುತ್ತಿದೆ ಎಂದರು.</p>.<p><strong>‘144 ಬಾಲಾಪರಾಧಿಗಳ ಬಂಧನ’</strong></p>.<p><strong>ನವದೆಹಲಿ:</strong> 370ನೇ ವಿಧಿ ರದ್ದುಪಡಿಸಿದ ನಂತರ 144 ಬಾಲಾಪರಾಧಿಗಳನ್ನು ಬಂಧಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ನಬಾಲಾಪರಾಧಿ ನ್ಯಾಯ ಸಮಿತಿ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.</p>.<p>ಬಂಧಿತರ ಪೈಕಿ 142 ಬಾಲಾಪರಾಧಿಗಳನ್ನು ಬಿಡುಗಡೆ ಮಾಡಲಾಗಿದ್ದು, ಇಬ್ಬರನ್ನು ಬಾಲಗೃಹಕ್ಕೆ ಕಳುಹಿಸಲಾಗಿದೆ ಎಂದು ಸಮಿತಿ ನೀಡಿರುವ ವರದಿಯಲ್ಲಿ ಹೇಳಲಾಗಿದೆ.</p>.<p>ಮಕ್ಕಳ ಹಕ್ಕುಗಳ ಹೋರಾಟಗಾರರಾದಎನಾಕ್ಷಿ ಗಂಗೂಲಿ ಮತ್ತು ಶಾಂತಾ ಸಿನ್ಹಾ ಅವರು ಬಾಲಕರನ್ನು ಬಂಧಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎನ್.ವಿ.ರಮಣ, ಎಂ.ಆರ್.ಶಾ ಮತ್ತು ಬಿ.ಆರ್.ಗವಾಯಿ ಅವರಿದ್ದ ನ್ಯಾಯಪೀಠಕ್ಕೆ ಸಮಿತಿ ವರದಿ ಸಲ್ಲಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>