‘ಜನಸಂಘದ ಕಾಲದಿಂದಲೂ ಬಿಜೆಪಿ ಏಕರೂಪ ನಾಗರಿಕ ಸಂಹಿತೆಗೆ ಬದ್ಧವಾಗಿದೆ. ಇದು ಹತ್ತಾರು ವರ್ಷಗಳಿಂದ ಚರ್ಚೆಯಲ್ಲಿರುವ ವಿಚಾರ. ಶ್ಯಾಮ ಪ್ರಸಾದ್ ಮುಖರ್ಜಿ ಈ ವಿಚಾರವನ್ನು ಪ್ರಸ್ತಾಪಿಸಿದ್ದರು. ಅನುಮಾನಾಸ್ಪದವಾಗಿ ಅವರು ನಿಧನರಾದರು. ಸತತ ಚರ್ಚೆ, ಸಮಾಲೋಚನೆಯಿಂದಲೇ ಬಿಜೆಪಿ ಈ ವಿಚಾರವನ್ನು ಮುನ್ನೆಲೆಗೆ ತಂದಿದೆ. ಈ ವಿಚಾರದಲ್ಲಿ ಚರ್ಚೆ ನಡೆಸಿಲ್ಲ ಎನ್ನುವ ಪ್ರತಿಪಕ್ಷಗಳ ಆರೋಪ ನಿರಾಧಾರ’ ಎಂದು ಹೇಳಿದರು.