ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇದು ಸಾಕಷ್ಟು ಯೋಚಿಸಿ ತೆಗೆದುಕೊಂಡ ನಿರ್ಧಾರ: ನಿರ್ಮಲಾ ಸೀತಾರಾಮನ್

Last Updated 7 ಆಗಸ್ಟ್ 2019, 5:18 IST
ಅಕ್ಷರ ಗಾತ್ರ

ನವದೆಹಲಿ: ಆರ್ಟಿಕಲ್‌ 370 ರದ್ದುಗೊಳಿಸಲು ಕೇಂದ್ರ ಸರ್ಕಾರ ಕೈಗೊಂಡಿರುವ ತೀರ್ಮಾನ ಸಾಕಷ್ಟು ಯೋಚಿಸಿ ತೆಗೆದುಕೊಂಡ ನಿರ್ಧಾರವಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

‘ಜನಸಂಘದ ಕಾಲದಿಂದಲೂ ಬಿಜೆಪಿ ಏಕರೂಪ ನಾಗರಿಕ ಸಂಹಿತೆಗೆ ಬದ್ಧವಾಗಿದೆ. ಇದು ಹತ್ತಾರು ವರ್ಷಗಳಿಂದ ಚರ್ಚೆಯಲ್ಲಿರುವ ವಿಚಾರ. ಶ್ಯಾಮ ಪ್ರಸಾದ್ ಮುಖರ್ಜಿ ಈ ವಿಚಾರವನ್ನು ಪ್ರಸ್ತಾಪಿಸಿದ್ದರು. ಅನುಮಾನಾಸ್ಪದವಾಗಿ ಅವರು ನಿಧನರಾದರು. ಸತತ ಚರ್ಚೆ, ಸಮಾಲೋಚನೆಯಿಂದಲೇ ಬಿಜೆಪಿ ಈ ವಿಚಾರವನ್ನು ಮುನ್ನೆಲೆಗೆ ತಂದಿದೆ. ಈ ವಿಚಾರದಲ್ಲಿ ಚರ್ಚೆ ನಡೆಸಿಲ್ಲ ಎನ್ನುವ ಪ್ರತಿಪಕ್ಷಗಳ ಆರೋಪ ನಿರಾಧಾರ’ ಎಂದು ಹೇಳಿದರು.

ರಾಜ್ಯಸಭೆಯಲ್ಲಿ ಇಂದು ನಡೆಯುತ್ತಿರುವ ಈ ಚರ್ಚೆ ಐತಿಹಾಸಿಕವಾದುದು. ಹಲವು ವರ್ಷಗಳಿಂದ ದೇಶ ಈ ದಿನಕ್ಕಾಗಿ ಕಾಯುತ್ತಿತ್ತು. ಜಮ್ಮು ಮತ್ತು ಕಾಶ್ಮೀರವನ್ನು ಭಾರತದ ಅಂಗವಾಗಿಸುವ ಈ ಕ್ಷಣಕ್ಕಾಗಿ ದೇಶ ಕಾಯುತ್ತಿತ್ತು ಎಂದು ಅವರು ನುಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT