<p><strong>ಶ್ರೀನಗರ:</strong> ಸಂಸತ್ತಿನ ಮೇಲಿನ ದಾಳಿಕೋರ ಮೊಹ್ಮದ್ ಅಫ್ಜಲ್ಗುರು ನೇಣಿಗೇರಿದ ಏಳನೇ ವರ್ಷದ ಸ್ಮರಣೋತ್ಸವ ಆಚರಣೆ ಅಂಗವಾಗಿ ಭಾನುವಾರ ಪ್ರತ್ಯೇಕತಾವಾದಿಗಳು ಬಂದ್ಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಕಾಶ್ಮೀರ ಕಣಿವೆಯಾದ್ಯಂತ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು.</p>.<p>ಕಾನೂನು ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಭಾನುವಾರ ಮುಂಜಾನೆಯಿಂದ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಯಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದರು.</p>.<p>ಬಂದ್ ಹಿನ್ನೆಲೆಯಲ್ಲಿ ಶ್ರೀನಗರದಾದ್ಯಂತ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿತ್ತು. ವಾಹನಗಳ ಸಂಚಾರ ವಿರಳವಾಗಿತ್ತು.<br />ಭಾನುವಾರ (ಫೆ.9) ಹಾಗೂ ಮಂಗಳವಾರ (ಫೆ.11) ಬಂದ್ಗೆ ಕರೆ ನೀಡಿದ್ದ ಜಮ್ಮು ಕಾಶ್ಮೀರ ಲಿಬರೇಷನ್ ಫ್ರಂಟ್ನ ಪತ್ರಿಕಾ ಹೇಳಿಕೆಯನ್ನು ವರದಿ ಮಾಡಿದ ಇಬ್ಬರು ಪತ್ರಕರ್ತರನ್ನು ಪೊಲೀಸರು ಐದು ತಾಸು ವಿಚಾರಣೆ ನಡೆಸಿ ಕಳುಹಿಸಿದ್ದಾರೆ.</p>.<p>ಬಂದ್ಗೆ ಕರೆ ನೀಡಿದ್ದ ನಿಷೇಧಿತ ಜಮ್ಮು ಕಾಶ್ಮೀರ ಲಿಬರೇಷನ್ ಫ್ರಂಟ್ನ (ಜೆಕೆಎಲ್ಎಫ್) ಸಂಘಟಕರ ವಿರುದ್ಧ ಪೊಲೀಸರು ಶನಿವಾರ ಪ್ರಕರಣ ದಾಖಲಿಸಿಕೊಂಡಿದ್ದರು.2001ರ ಡಿಸೆಂಬರ್ನಲ್ಲಿ ಸಂಸತ್ ಮೇಲೆ ದಾಳಿ ನಡೆಸಿದ ಅಫ್ಜಲ್ಗುರುವನ್ನು 2013ರಲ್ಲಿ ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಸಂಸತ್ತಿನ ಮೇಲಿನ ದಾಳಿಕೋರ ಮೊಹ್ಮದ್ ಅಫ್ಜಲ್ಗುರು ನೇಣಿಗೇರಿದ ಏಳನೇ ವರ್ಷದ ಸ್ಮರಣೋತ್ಸವ ಆಚರಣೆ ಅಂಗವಾಗಿ ಭಾನುವಾರ ಪ್ರತ್ಯೇಕತಾವಾದಿಗಳು ಬಂದ್ಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಕಾಶ್ಮೀರ ಕಣಿವೆಯಾದ್ಯಂತ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು.</p>.<p>ಕಾನೂನು ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಭಾನುವಾರ ಮುಂಜಾನೆಯಿಂದ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಯಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದರು.</p>.<p>ಬಂದ್ ಹಿನ್ನೆಲೆಯಲ್ಲಿ ಶ್ರೀನಗರದಾದ್ಯಂತ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿತ್ತು. ವಾಹನಗಳ ಸಂಚಾರ ವಿರಳವಾಗಿತ್ತು.<br />ಭಾನುವಾರ (ಫೆ.9) ಹಾಗೂ ಮಂಗಳವಾರ (ಫೆ.11) ಬಂದ್ಗೆ ಕರೆ ನೀಡಿದ್ದ ಜಮ್ಮು ಕಾಶ್ಮೀರ ಲಿಬರೇಷನ್ ಫ್ರಂಟ್ನ ಪತ್ರಿಕಾ ಹೇಳಿಕೆಯನ್ನು ವರದಿ ಮಾಡಿದ ಇಬ್ಬರು ಪತ್ರಕರ್ತರನ್ನು ಪೊಲೀಸರು ಐದು ತಾಸು ವಿಚಾರಣೆ ನಡೆಸಿ ಕಳುಹಿಸಿದ್ದಾರೆ.</p>.<p>ಬಂದ್ಗೆ ಕರೆ ನೀಡಿದ್ದ ನಿಷೇಧಿತ ಜಮ್ಮು ಕಾಶ್ಮೀರ ಲಿಬರೇಷನ್ ಫ್ರಂಟ್ನ (ಜೆಕೆಎಲ್ಎಫ್) ಸಂಘಟಕರ ವಿರುದ್ಧ ಪೊಲೀಸರು ಶನಿವಾರ ಪ್ರಕರಣ ದಾಖಲಿಸಿಕೊಂಡಿದ್ದರು.2001ರ ಡಿಸೆಂಬರ್ನಲ್ಲಿ ಸಂಸತ್ ಮೇಲೆ ದಾಳಿ ನಡೆಸಿದ ಅಫ್ಜಲ್ಗುರುವನ್ನು 2013ರಲ್ಲಿ ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>