<p><strong>ಶ್ರೀನಗರ:</strong> ಕಳೆದ ಆಗಸ್ಟ್ನಿಂದ ಬಂಧನದಲ್ಲಿರುವ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಶ್ರೀನಗರದ ಅವರ ಅಧಿಕೃತ ನಿವಾಸದ ಬಳಿಯಿರುವ ಬಂಗಲೆಗೆ ಸ್ಥಳಾಂತರಿಸಲಾಗುವುದು. ಈ ಬಗ್ಗೆ ಮೂಲಗಳನ್ನು ಉಲ್ಲೇಖಿಸಿ ಎನ್ಡಿಟಿವಿ ವರದಿ ಮಾಡಿದೆ.</p>.<p>ಮತ್ತೊಂದು ಬಂಗಲೆಗೆ ಸ್ಥಳಾಂತರಿಸಿದರೂ ಅವರು ಬಂಧನದಲ್ಲಿಯೇ ಇರುತ್ತಾರೆ.</p>.<p>ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಫೆಬ್ರುವರಿಯಲ್ಲಿ ಭಾರತಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ, ಹಲವಾರು ವಿಷಯಗಳ ಬಗ್ಗೆ ಚರ್ಚಿಸಿದ ನಂತರ ಸರ್ಕಾರ ಈ ಕ್ರಮ ಕೈಗೊಂಡಿದೆ. ಕೇಂದ್ರ ಸಚಿವರ ನಿಯೋಗವೊಂದು ಸಹ ಕಾಶ್ಮೀರ ಕಣಿವೆಗೆ ಭೇಟಿ ನೀಡುವ ನಿರೀಕ್ಷೆ ಇದೆ ಎಂದು ವರದಿಯಲ್ಲಿ ಹೇಳಲಾಗಿದೆ.</p>.<p>ಜಮ್ಮು–ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ನಂತರ ಕಳೆದ ಆಗಸ್ಟ್ 5 ರಿಂದ ಒಮರ್ ಅವರನ್ನು ಗೃಹಬಂಧನದಲ್ಲಿರಿಸಲಾಗಿದೆ. ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಅವರನ್ನು ಸಹ ಬಂಧನದಲ್ಲಿರಿಸಲಾಗಿದೆ.</p>.<p>ಒಮರ್ ಅವರು ರಾಜ್ಯದ ಅತಿಥಿಗೃಹ ಹರಿ ನಿವಾಸದಲ್ಲಿ ಬಂಧನದಲ್ಲಿದ್ದರು. ಅವರ ತಂದೆ ಫಾರೂಕ್ ಅಬ್ದುಲ್ಲಾ ಅವರು ತಮ್ಮ ನಿವಾಸದಲ್ಲಿಯೇ ಬಂಧನದಲ್ಲಿದ್ದಾರೆ. ಮೆಹಬೂಬಾ ಮುಫ್ತಿ ಅವರು ಅತಿಥಿಗೃಹದಲ್ಲಿಯೇ ಉಳಿಯಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಕಳೆದ ಆಗಸ್ಟ್ನಿಂದ ಬಂಧನದಲ್ಲಿರುವ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಶ್ರೀನಗರದ ಅವರ ಅಧಿಕೃತ ನಿವಾಸದ ಬಳಿಯಿರುವ ಬಂಗಲೆಗೆ ಸ್ಥಳಾಂತರಿಸಲಾಗುವುದು. ಈ ಬಗ್ಗೆ ಮೂಲಗಳನ್ನು ಉಲ್ಲೇಖಿಸಿ ಎನ್ಡಿಟಿವಿ ವರದಿ ಮಾಡಿದೆ.</p>.<p>ಮತ್ತೊಂದು ಬಂಗಲೆಗೆ ಸ್ಥಳಾಂತರಿಸಿದರೂ ಅವರು ಬಂಧನದಲ್ಲಿಯೇ ಇರುತ್ತಾರೆ.</p>.<p>ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಫೆಬ್ರುವರಿಯಲ್ಲಿ ಭಾರತಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ, ಹಲವಾರು ವಿಷಯಗಳ ಬಗ್ಗೆ ಚರ್ಚಿಸಿದ ನಂತರ ಸರ್ಕಾರ ಈ ಕ್ರಮ ಕೈಗೊಂಡಿದೆ. ಕೇಂದ್ರ ಸಚಿವರ ನಿಯೋಗವೊಂದು ಸಹ ಕಾಶ್ಮೀರ ಕಣಿವೆಗೆ ಭೇಟಿ ನೀಡುವ ನಿರೀಕ್ಷೆ ಇದೆ ಎಂದು ವರದಿಯಲ್ಲಿ ಹೇಳಲಾಗಿದೆ.</p>.<p>ಜಮ್ಮು–ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ನಂತರ ಕಳೆದ ಆಗಸ್ಟ್ 5 ರಿಂದ ಒಮರ್ ಅವರನ್ನು ಗೃಹಬಂಧನದಲ್ಲಿರಿಸಲಾಗಿದೆ. ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಅವರನ್ನು ಸಹ ಬಂಧನದಲ್ಲಿರಿಸಲಾಗಿದೆ.</p>.<p>ಒಮರ್ ಅವರು ರಾಜ್ಯದ ಅತಿಥಿಗೃಹ ಹರಿ ನಿವಾಸದಲ್ಲಿ ಬಂಧನದಲ್ಲಿದ್ದರು. ಅವರ ತಂದೆ ಫಾರೂಕ್ ಅಬ್ದುಲ್ಲಾ ಅವರು ತಮ್ಮ ನಿವಾಸದಲ್ಲಿಯೇ ಬಂಧನದಲ್ಲಿದ್ದಾರೆ. ಮೆಹಬೂಬಾ ಮುಫ್ತಿ ಅವರು ಅತಿಥಿಗೃಹದಲ್ಲಿಯೇ ಉಳಿಯಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>