ಹಜ್ ಯಾತ್ರೆ ಪೂರ್ಣಗೊಳಿಸಿ ಹಿಂದಿರುಗಿದ ಸುಮಾರು 300 ಮಂದಿಯನ್ನು ಹೊತ್ತ ವಿಮಾನ ಭಾನುವಾರ ಬೆಳಿಗ್ಗೆ ಶ್ರೀನಗರ ನಿಲ್ದಾಣದಲ್ಲಿ ಇಳಿದಿದೆ. ಈ ಯಾತ್ರಿಕರು ತಮ್ಮ ತಮ್ಮ ಮನೆಗಳಿಗೆ ತಲುಪಲು ಬೇಕಾದ ವ್ಯವಸ್ಥೆಯನ್ನು ಸರ್ಕಾರ ಮಾಡಿದೆ. ವಿಮಾನ ನಿಲ್ದಾಣದಲ್ಲಿ ಇವರನ್ನು ಬರಮಾಡಿಕೊಳ್ಳಲು ಕುಟುಂಬದ ಒಬ್ಬ ವ್ಯಕ್ತಿಗೆ ಮಾತ್ರ ಅವಕಾಶ ನೀಡಲಾಗಿತ್ತು. ರಾಜ್ಯ ರಸ್ತೆ ಸಾರಿಗೆ ಬಸ್ನಲ್ಲಿ ಇವರೆಲ್ಲರನ್ನೂ ಮನೆಗೆ ಕಳುಹಿಸಲಾಗಿದೆ.