ಶ್ರೀನಗರ:ಜಮ್ಮು ಮತ್ತು ಕಾಶ್ಮಿರಕ್ಕೆ ವಿಶೇಷ ಸ್ಥಾನ ನೀಡಿದ್ದ 370 ವಿಧಿ ರದ್ದುಗೊಳಿಸಿ, ರಾಜ್ಯ ವಿಭಜನೆ ಮಾಡಿ ಕೇಂದ್ರಾಡಳಿತ ಪ್ರದೇಶಗಳಾಗಿ ಘೋಷಣೆ ಮಾಡಿದ ಬಳಿಕ, ಕಣಿವೆ ನಾಡಿನಲ್ಲಿ ಬಿಗುವಿನ ವಾತಾವರಣ ತಿಳಿಯಾಗುತ್ತಿದೆ. ಶುಕ್ರವಾರ ಶಾಲೆಗಳು ಪುನರಾರಂಭವಾಗಿದ್ದು, ಮಸೀದಿಗಳಲ್ಲಿ ಜನ ಪ್ರಾರ್ಥನೆ ಸಲ್ಲಿಸಿದ್ದಾರೆ.