ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಗರ: ಉಗ್ರರ ಜತೆಗಿದ್ದ ಡಿವೈಎಸ್‌ಪಿ ಬಂಧನ

ಒಂದೇ ಕಾರಿನಲ್ಲಿ ಪ್ರಯಾಣ l ಎರಡು ರೈಫಲ್‌ ಸೇರಿದಂತೆ ಶಸ್ತ್ರಾಸ್ತ್ರಗಳು ವಶಕ್ಕೆ
Last Updated 12 ಜನವರಿ 2020, 19:42 IST
ಅಕ್ಷರ ಗಾತ್ರ

ಶ್ರೀನಗರ : ಒಂದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಡಿವೈಎಸ್‌ಪಿ ಮತ್ತು ಇಬ್ಬರು ಭಯೋತ್ಪಾದಕರನ್ನು ಬಂಧಿಸಲಾಗಿದೆ ಎಂದು ಭಾನುವಾರ ಪೊಲೀಸರು ಹೇಳಿದ್ದಾರೆ.

ಡಿವೈಎಸ್‌ಪಿ ದವಿಂದರ್‌ ಸಿಂಗ್ ಶ್ರೀನಗರ ವಿಮಾನ ನಿಲ್ದಾಣಕ್ಕೆ ಅಪಹರಣ ತಡೆ ತಂಡದ ಅಧಿಕಾರಿಯಾಗಿ ನಿಯೋಜನೆಗೊಂಡಿದ್ದರು. ಉಗ್ರರಾದ ನವೀದ್‌ ಬಾಬು ಮತ್ತು ಅಲ್ತಾಫ್‌ ಅವರ ಜತೆ ದವಿಂದ್‌ ಸಿಂಗ್‌ ಶನಿವಾರ ಶೋಪಿಯಾನ್‌ನಿಂದ ಪಯಣಿಸುತ್ತಿದ್ದರು. ಕಾರಿನಲ್ಲಿದ್ದ ಎರಡು ಎ.ಕೆ. ರೈಫಲ್‌ಗಳು, ಸಿಂಗ್‌ ಮನೆಯಲ್ಲಿ ಶೋಧದ ವೇಳೆ ಸಿಕ್ಕ ಎರಡು ಪಿಸ್ತೂಲುಗಳು ಮತ್ತು ಒಂದು ಎ.ಕೆ. ರೈಫಲ್‌ ಅನ್ನು ವಶಕ್ಕೆ ಪಡೆಯಲಾಗಿದೆ. ಡಿವೈಎಸ್‌ಪಿಯನ್ನು ಸಹ ಉಗ್ರ ಎಂಬುದಾಗಿ ಪರಿಗಣಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ನವೀದ್‌ ಈ ಮೊದಲು ಪೊಲೀಸ್‌ ಕಾನ್‌ಸ್ಟೆಬಲ್‌ ಆಗಿದ್ದು, 2017ರಲ್ಲಿ ಹಿಜ್ಬುಲ್‌ ಮುಜಾಹಿದ್ದೀನ್‌ ಭಯೋತ್ಪಾದಕ ಸಂಘಟನೆ ಸೇರಿದ್ದ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT