<p><strong>ಶ್ರೀನಗರ</strong>: ಕೊರೊನಾ ವೈರಸ್ ಭೀತಿಯಿಂದಾಗಿ ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಬುಧವಾರ ಮುಂಜಾಗ್ರತಾ ಕ್ರಮವಾಗಿ ಪ್ರಸಿದ್ಧ ವೈಷ್ಣೊದೇವಿ ಯಾತ್ರೆಯನ್ನು ರದ್ದುಪಡಿಸಿದೆ.</p>.<p>ಬುಧವಾರದಿಂದಲೇ ವೈಷ್ಣೊದೇವಿ ಯಾತ್ರೆ ರದ್ದುಪಡಿಸಲಾಗಿದೆ. ಅಲ್ಲದೇ ಜಮ್ಮು ಮತ್ತು ಕಾಶ್ಮೀರವನ್ನು ಸಂಪರ್ಕಿಸುವ ಅಂತರರಾಜ್ಯ ಬಸ್ಗಳ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಸರ್ಕಾರದ ವಕ್ತಾರರು ತಿಳಿಸಿದ್ದಾರೆ.</p>.<p>ಈಗಾಗಲೇ ಯಾತ್ರೆಯ ಆರಂಭಿಕ ಸ್ಥಳವಾದ ಕತ್ರಾ ವನ್ನು ತಲುಪಿರುವ ಯಾತ್ರಿಕರು ಹಾಗೂ ಪ್ರಸ್ತುತ ಯಾತ್ರೆ ಆರಂಭಿಸಿರುವ ಯಾತ್ರಿಕರು ಮುಂಜಾಗ್ರತೆಯನ್ನು ವಹಿಸಬೇಕು ಎಂದು ದೇವಸ್ಥಾನ ಸಮಿತಿ ಮನವಿ ಮಾಡಿದೆ.</p>.<p>ಎಲ್ಲೆಡೆ ಕೊರೊನಾ ವೈರಸ್ ಹರಡುತ್ತಿರುವ ಪರಿಣಾಮ ಯಾತ್ರೆಯನ್ನು ಮುಂದೂಡುವಂತೆ ಶ್ರೀಮಾತಾ ವೈಷ್ಣೊದೇವಿ ದೇವಸ್ಥಾನ ಮಂಡಳಿ ಮಂಗಳವಾರ ಮನವಿ ಮಾಡಿತ್ತು. ಅಲ್ಲದೇ ಯಾತ್ರಿಕರ ಸುರಕ್ಷತೆಗಾಗಿ ದೇವಸ್ಥಾನ ಮಂಡಳಿಯು ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದು, ಅಧುಕುವರಿ ಪ್ರದೇಶದ ಗುಹೆಯ ಪ್ರವೇಶವನ್ನು ನಿಷೇಧಿಸಿದೆ.</p>.<p><strong>ಪೊಲೀಸ್ ಅಧಿಕಾರಿಗಳ ನಿಯೋಜನೆ: </strong>ಕೇಂದ್ರಾಡಳಿತ ಪ್ರದೇಶದ ವ್ಯಾಪ್ತಿಯಲ್ಲಿ ಕೊರೊನಾ ತಡೆಗಟ್ಟಲು ಜಿಲ್ಲಾಡಳಿತಕ್ಕೆ ನೆರವಾಗುವ ನಿಟ್ಟಿನಲ್ಲಿ 20 ಡಿವೈಎಸ್ಪಿಗಳನ್ನು ಸರ್ಕಾರ ನಿಯೋಜಿಸಿದೆ.ಈ ಕುರಿತು ಆದೇಶ ಹೊರಡಿಸಿರುವ ಗೃಹ ಇಲಾಖೆಯು, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯು ಜಿಲ್ಲಾ ಕೇಂದ್ರಗಳಲ್ಲಿ ಸ್ಥಾಪಿಸಿರುವ ಕೇಂದ್ರಗಳಲ್ಲಿ ಈ ಪೊಲೀಸ್ ಅಧಿಕಾರಿಗಳು ಉಳಿದುಕೊಂಡು, ಸೋಕಿತರ ಸಂಪರ್ಕ ವಿವರ ಪತ್ತೆ, ರೋಗ ಪೀಡಿತರು ಹಾಗೂ ಶಂಕಿತರನ್ನು ಪ್ರತ್ಯೇಕವಾಗಿ ಇರಿಸುವ ಕಾರ್ಯದಲ್ಲಿ ನೆರವಾಗುತ್ತಾರೆ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಕೊರೊನಾ ವೈರಸ್ ಭೀತಿಯಿಂದಾಗಿ ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಬುಧವಾರ ಮುಂಜಾಗ್ರತಾ ಕ್ರಮವಾಗಿ ಪ್ರಸಿದ್ಧ ವೈಷ್ಣೊದೇವಿ ಯಾತ್ರೆಯನ್ನು ರದ್ದುಪಡಿಸಿದೆ.</p>.<p>ಬುಧವಾರದಿಂದಲೇ ವೈಷ್ಣೊದೇವಿ ಯಾತ್ರೆ ರದ್ದುಪಡಿಸಲಾಗಿದೆ. ಅಲ್ಲದೇ ಜಮ್ಮು ಮತ್ತು ಕಾಶ್ಮೀರವನ್ನು ಸಂಪರ್ಕಿಸುವ ಅಂತರರಾಜ್ಯ ಬಸ್ಗಳ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಸರ್ಕಾರದ ವಕ್ತಾರರು ತಿಳಿಸಿದ್ದಾರೆ.</p>.<p>ಈಗಾಗಲೇ ಯಾತ್ರೆಯ ಆರಂಭಿಕ ಸ್ಥಳವಾದ ಕತ್ರಾ ವನ್ನು ತಲುಪಿರುವ ಯಾತ್ರಿಕರು ಹಾಗೂ ಪ್ರಸ್ತುತ ಯಾತ್ರೆ ಆರಂಭಿಸಿರುವ ಯಾತ್ರಿಕರು ಮುಂಜಾಗ್ರತೆಯನ್ನು ವಹಿಸಬೇಕು ಎಂದು ದೇವಸ್ಥಾನ ಸಮಿತಿ ಮನವಿ ಮಾಡಿದೆ.</p>.<p>ಎಲ್ಲೆಡೆ ಕೊರೊನಾ ವೈರಸ್ ಹರಡುತ್ತಿರುವ ಪರಿಣಾಮ ಯಾತ್ರೆಯನ್ನು ಮುಂದೂಡುವಂತೆ ಶ್ರೀಮಾತಾ ವೈಷ್ಣೊದೇವಿ ದೇವಸ್ಥಾನ ಮಂಡಳಿ ಮಂಗಳವಾರ ಮನವಿ ಮಾಡಿತ್ತು. ಅಲ್ಲದೇ ಯಾತ್ರಿಕರ ಸುರಕ್ಷತೆಗಾಗಿ ದೇವಸ್ಥಾನ ಮಂಡಳಿಯು ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದು, ಅಧುಕುವರಿ ಪ್ರದೇಶದ ಗುಹೆಯ ಪ್ರವೇಶವನ್ನು ನಿಷೇಧಿಸಿದೆ.</p>.<p><strong>ಪೊಲೀಸ್ ಅಧಿಕಾರಿಗಳ ನಿಯೋಜನೆ: </strong>ಕೇಂದ್ರಾಡಳಿತ ಪ್ರದೇಶದ ವ್ಯಾಪ್ತಿಯಲ್ಲಿ ಕೊರೊನಾ ತಡೆಗಟ್ಟಲು ಜಿಲ್ಲಾಡಳಿತಕ್ಕೆ ನೆರವಾಗುವ ನಿಟ್ಟಿನಲ್ಲಿ 20 ಡಿವೈಎಸ್ಪಿಗಳನ್ನು ಸರ್ಕಾರ ನಿಯೋಜಿಸಿದೆ.ಈ ಕುರಿತು ಆದೇಶ ಹೊರಡಿಸಿರುವ ಗೃಹ ಇಲಾಖೆಯು, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯು ಜಿಲ್ಲಾ ಕೇಂದ್ರಗಳಲ್ಲಿ ಸ್ಥಾಪಿಸಿರುವ ಕೇಂದ್ರಗಳಲ್ಲಿ ಈ ಪೊಲೀಸ್ ಅಧಿಕಾರಿಗಳು ಉಳಿದುಕೊಂಡು, ಸೋಕಿತರ ಸಂಪರ್ಕ ವಿವರ ಪತ್ತೆ, ರೋಗ ಪೀಡಿತರು ಹಾಗೂ ಶಂಕಿತರನ್ನು ಪ್ರತ್ಯೇಕವಾಗಿ ಇರಿಸುವ ಕಾರ್ಯದಲ್ಲಿ ನೆರವಾಗುತ್ತಾರೆ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>