ಸಾಂವಿಧಾನಿಕ ನ್ಯಾಯಾಲಯಗಳು ಯಾವುದೇ ಪ್ರಕರಣವನ್ನು ಸಿಬಿಐಗೆ ವಹಿಸಬಹುದು. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಅನುಮತಿ ಅಗತ್ಯ ಇಲ್ಲ ಎಂದು ರಾಜ್ಯಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ಸಿಂಗ್ ತಿಳಿಸಿದ್ದಾರೆ.ತನಿಖೆಗೆ ನೀಡಿದ ಅನುಮತಿಯನ್ನು ಪೂರ್ವಾನ್ವಯ ಆಗುವ ರೀತಿಯಲ್ಲಿ ರಾಜ್ಯಗಳು ಹಿಂದಕ್ಕೆ ಪಡೆಯುವುದಕ್ಕೂ ಅವಕಾಶ ಇಲ್ಲ ಎಂದೂ ಅವರು ಹೇಳಿದ್ದಾರೆ.