ಪ್ರಾಥಮಿಕ ಅಂದಾಜಿನ ಪ್ರಕಾರ, 9,000 ಹೆಕ್ಟೇರ್ನಲ್ಲಿ ಕೃಷಿ ಮತ್ತು 53,000 ಹೆಕ್ಟೇರ್ನಲ್ಲಿ ತೋಟಗಾರಿಕಾ ಬೆಳೆ ನಾಶವಾಗಿದೆ. ಕೇಂದ್ರ ಸರ್ಕಾರದ ನೆರವು ಬೇಕಾಗುವಷ್ಟು ಹಾನಿ ಇದಾಗಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಬಿ.ವಿ.ಆರ್. ಸುಬ್ರಹ್ಮಣ್ಯಂ ಅವರು ಕೇಂದ್ರ ಕೃಷಿ ಸಹಕಾರ ಮತ್ತು ರೈತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಅವರಿಗೆ ಮನವರಿಕೆ ಮಾಡಿಸಿದ್ದಾರೆ.