‘ಅಲ್ಖೈದಾದ ಕಮಾಂಡರ್ ಬುರ್ಹಾನ್ ಎಂಬುವವನೊಂದಿಗೆ ಸಂಪರ್ಕ ಹೊಂದಿದ್ದ ಜಾಕಿರ್ ಮೌಸಾ ಎಂಬಾತನನ್ನು ಭದ್ರತಾ ಸಿಬ್ಬಂದಿ ಮೇ 24ರಂದು ಪುಲ್ವಾಮದ ತ್ರಾಲ್ ಎಂಬಲ್ಲಿ ಎನ್ಕೌಂಟರ್ನಲ್ಲಿ ಕೊಂದಿದ್ದರು. ಇದಕ್ಕೆ ಪ್ರತಿಕಾರವಾಗಿ ಉಗ್ರರು ದಾಳಿ ನಡೆಸಲು ಹೊಂಚು ಹಾಕಿದ್ದಾರೆ.ಆವಂತಿಪುರ ಮತ್ತು ಪುಲ್ವಾಮ ಪಟ್ಟಣಗಳಲ್ಲಿ ಅತ್ಯಾಧುನಿಕ ಸ್ಫೋಟಕಗಳನ್ನು (ಐಇಡಿ) ವಾಹನಗಳ ಮೂಲಕ ತಂದು ಸ್ಫೋಟಿಸುವುದುಉಗ್ರರ ಯೋಜನೆಯಾಗಿದೆ,’ ಎಂದು ಪಾಕಿಸ್ತಾನವು ಭಾರತದೊಂದಿಗೆ ಮಾಹಿತಿ ಹಂಚಿಕೊಂಡಿದೆ. ಇದೇ ಹಿನ್ನೆಲೆಯಲ್ಲಿ, ಎಚ್ಚರಿಕೆಯಿಂದ ಇರುವಂತೆ ಜಮ್ಮು ಕಾಶ್ಮೀರದ ಎಲ್ಲ ಭದ್ರತಾ ಏಜನ್ಸಿಗಳಿಗೂ ತಿಳಿಸಲಾಗಿದೆ.