<p>ನವದೆಹಲಿ : ಜೆಎನ್ಯು ಕ್ಯಾಂಪಸ್ನಲ್ಲಿ ಕಳೆದ ಭಾನುವಾರ ನಡೆದ ದಾಂದಲೆಗೆ ಸಂಬಂಧಿಸಿ ದೆಹಲಿ ಪೊಲೀಸರು 49 ಮಂದಿಗೆ ನೋಟಿಸ್ ಜಾರಿ ಮಾಡಿದ್ದಾರೆ.</p>.<p>ಟಿ.ವಿ.ವಾಹಿನಿಯೊಂದು ನಡೆಸಿದ್ದ ಕುಟುಕು ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದ ವಿ.ವಿಯ ಪ್ರಥಮ ವರ್ಷದ ವಿದ್ಯಾರ್ಥಿಗಳಾದ ಅಕ್ಷತ್ ಅವಸ್ತಿ ಮತ್ತು ರೋಹಿತ್ ಶಾ ಅವರಿಗೂ ನೋಟಿಸ್ ಜಾರಿಯಾಗಿದೆ.</p>.<p>‘ಮೊದಲು ಕರೆ ಮಾಡಿದಾಗ ಈ ಇಬ್ಬರೂ ತನಿಖೆಗೆ ಸಹಕರಿಸಲಾಗುವುದು ಎಂದಿದ್ದರು. ಈಗ ಇಬ್ಬರು ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಅವರ ನೆಲೆಯನ್ನು ಪತ್ತೆ ಮಾಡಿ, ದಾಂದಲೆಯಲ್ಲಿ ಅವರ ಪಾತ್ರ ಕುರಿತಂತೆ ತನಿಖೆಗೆ ಒಳಪಡಿಸಲಾಗುವುದು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕೋಮಲ್ ಶರ್ಮಾ ದೌಲತ್ ರಾಂ ಕಾಲೇಜಿನ ವಿದ್ಯಾರ್ಥಿನಿ. ಇವರ ಮೊಬೈಲ್ ಫೋನ್ ಶನಿವಾರ<br />ದಿಂದ ಸ್ವಿಚ್ ಆಫ್ ಆಗಿದೆ. ಇವರನ್ನೂ ತನಿಖೆಗೆ ಒಳಪಡಿಸಲಾಗುವುದು ಎಂದು ತಿಳಿಸಿದ್ದಾರೆ.</p>.<p>ಪ್ರಕರಣ ಸಂಬಂಧ ಈಗಾಗಲೇ ಶಂಕಿತರಾಗಿ ಗುರುತಿಸಿರುವ ವಿಕಾಸ್ ಪಟೇಲ್ ಮತ್ತು ಯೋಗೇಂದ್ರ ಭಾರದ್ವಾಜ್ ಅವರು ಆರ್ಎಸ್ಎಸ್ ಬೆಂಬಲಿತ ಎಬಿವಿಪಿ ಸದಸ್ಯರು ಎಂದು ಪೊಲೀಸ್ ಮೂಲಗಳು ಸ್ಪಷ್ಟಪಡಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ : ಜೆಎನ್ಯು ಕ್ಯಾಂಪಸ್ನಲ್ಲಿ ಕಳೆದ ಭಾನುವಾರ ನಡೆದ ದಾಂದಲೆಗೆ ಸಂಬಂಧಿಸಿ ದೆಹಲಿ ಪೊಲೀಸರು 49 ಮಂದಿಗೆ ನೋಟಿಸ್ ಜಾರಿ ಮಾಡಿದ್ದಾರೆ.</p>.<p>ಟಿ.ವಿ.ವಾಹಿನಿಯೊಂದು ನಡೆಸಿದ್ದ ಕುಟುಕು ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದ ವಿ.ವಿಯ ಪ್ರಥಮ ವರ್ಷದ ವಿದ್ಯಾರ್ಥಿಗಳಾದ ಅಕ್ಷತ್ ಅವಸ್ತಿ ಮತ್ತು ರೋಹಿತ್ ಶಾ ಅವರಿಗೂ ನೋಟಿಸ್ ಜಾರಿಯಾಗಿದೆ.</p>.<p>‘ಮೊದಲು ಕರೆ ಮಾಡಿದಾಗ ಈ ಇಬ್ಬರೂ ತನಿಖೆಗೆ ಸಹಕರಿಸಲಾಗುವುದು ಎಂದಿದ್ದರು. ಈಗ ಇಬ್ಬರು ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಅವರ ನೆಲೆಯನ್ನು ಪತ್ತೆ ಮಾಡಿ, ದಾಂದಲೆಯಲ್ಲಿ ಅವರ ಪಾತ್ರ ಕುರಿತಂತೆ ತನಿಖೆಗೆ ಒಳಪಡಿಸಲಾಗುವುದು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕೋಮಲ್ ಶರ್ಮಾ ದೌಲತ್ ರಾಂ ಕಾಲೇಜಿನ ವಿದ್ಯಾರ್ಥಿನಿ. ಇವರ ಮೊಬೈಲ್ ಫೋನ್ ಶನಿವಾರ<br />ದಿಂದ ಸ್ವಿಚ್ ಆಫ್ ಆಗಿದೆ. ಇವರನ್ನೂ ತನಿಖೆಗೆ ಒಳಪಡಿಸಲಾಗುವುದು ಎಂದು ತಿಳಿಸಿದ್ದಾರೆ.</p>.<p>ಪ್ರಕರಣ ಸಂಬಂಧ ಈಗಾಗಲೇ ಶಂಕಿತರಾಗಿ ಗುರುತಿಸಿರುವ ವಿಕಾಸ್ ಪಟೇಲ್ ಮತ್ತು ಯೋಗೇಂದ್ರ ಭಾರದ್ವಾಜ್ ಅವರು ಆರ್ಎಸ್ಎಸ್ ಬೆಂಬಲಿತ ಎಬಿವಿಪಿ ಸದಸ್ಯರು ಎಂದು ಪೊಲೀಸ್ ಮೂಲಗಳು ಸ್ಪಷ್ಟಪಡಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>