ಗಾಯಗೊಂಡ ವಿದ್ಯಾರ್ಥಿಗಳಿಗೆ ನಮ್ಮ ಹೃದಯ ಮಿಡಿದಿದೆ. ಜನವರಿ 5 ರಂದು ನಡೆದ ಘಟನೆ ದುರದೃಷ್ಟಕರ. ಯಾವುದೇ ಸಮಸ್ಯೆ ಬಂದರೂ ಅದನ್ನು ಚರ್ಚೆ ಮತ್ತು ಸಂವಾದಗಳ ಮೂಲಕ ಪರಿಹರಿಸುವ ಕ್ಯಾಂಪಸ್ ನಮ್ಮದು. ಹಿಂಸೆ ಯಾವುದಕ್ಕೂ ಪರಿಹಾರವಲ್ಲ. ವಿಶ್ವವಿದ್ಯಾಲಯ ಯಥಾಸ್ಥಿತಿಗೆ ಮರಳುವಂತೆ ಮಾಡುತ್ತೇವೆ. ಎಲ್ಲರೂ ಕ್ಯಾಂಪಸ್ಗೆ ಮರಳಿ ಬರಬೇಕು ಎಂದು ನಾನು ವಿನಂತಿಸುತ್ತಿದ್ದೇನೆ. ನಡೆದುದ್ದನ್ನು ಮರೆತು ಹೊಸ ಆರಂಭ ಮಾಡೋಣ ಎಂದು ಉಪಕುಲಪತಿ ಹೇಳಿದ್ದಾರೆ.