<p><strong>ನವದೆಹಲಿ:</strong>ಕೇಂದ್ರ ಸರ್ಕಾರ ಹಾಗೂ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಸಾಮಾಜಿಕ ಕಾರ್ಯಕರ್ತ ಹಾಗೂ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಬುಧವಾರ ನೋಟಿಸ್ ನೀಡಿದೆ. ಉತ್ತರಿಸಲು ಮೂರು ವಾರ ಕಾಲಾವಕಾಶ ನೀಡಲಾಗಿದೆ.</p>.<p>ಸಿಬಿಐ ಮಧ್ಯಂತರ ನಿರ್ದೇಶಕರಾಗಿ ಎಂ.ನಾಗೇಶ್ವರರಾವ್ ಅವರ ನೇಮಕದ ಬಗ್ಗೆ ಕೋರ್ಟ್ ನಿರ್ಧಾರವನ್ನು ಪ್ರಶ್ನಿಸಿ ಪ್ರಶಾಂತ್ ಭೂಷಣ್ ಅವರು ಟ್ವಿಟರ್ನಲ್ಲಿ ಟೀಕೆ ಮಾಡಿದ್ದರು.</p>.<p>‘ನ್ಯಾಯಾಂಗದ ಟೀಕೆಯು ಸಾರ್ವಜನಿಕ ಅಭಿಪ್ರಾಯದ ಮೇಲೆ ಪ್ರಭಾವ ಬೀರಲು ದಾರಿ ಮಾಡಿಕೊಡುತ್ತದೆ. ಅಲ್ಲದೆ ಇದು ನ್ಯಾಯದಾನ ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶ ಮಾಡಲು ಕಾರಣವಾಗುತ್ತದೆ’ ಎಂದು ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ ಹಾಗೂ ನವೀನ್ ಸಿಂಗ್ ಅವರನ್ನೊಳಗೊಂಡ ಪೀಠ ಅಭಿಪ್ರಾಯಪಟ್ಟಿದೆ.</p>.<p>ನ್ಯಾಯಾಂಗ ನಿಂದನೆಯಾಗಬಲ್ಲ ವಿಷಯದ ಕುರಿತು ವಕೀಲರು ಅಥವಾ ವ್ಯಕ್ತಿಯೊಬ್ಬರು ನ್ಯಾಯಾಲಯವನ್ನು ಟೀಕೆ ಮಾಡಬಹುದೇ ಎಂಬ ದೊಡ್ಡ ಪ್ರಶ್ನೆಗೆ ಇದು ಹಾದಿಮಾಡಿಕೊಟ್ಟಿದ್ದು, ಸುದೀರ್ಘ ಚರ್ಚೆ ಅಗತ್ಯವಿದೆ. ನೋಟಿಸ್ ನೀಡಲಾಗಿದ್ದು, ಮಾರ್ಚ್ 7ರಂದು ಮುಂದಿನ ವಿಚಾರಣೆ ನಡೆಸಲಾಗುವುದು ಎಂದು ಪೀಠ ಹೇಳಿದೆ.</p>.<p>ರಾವ್ ಅವರ ನೇಮಕದಲ್ಲಿ ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್ ಅನ್ನು ತಪ್ಪುದಾರಿಗೆ ಎಳೆದಿದೆ ಎಂದು ಭೂಷನ್ ಟ್ವೀಟ್ ಮಾಡಿದ್ದರು. ಹೀಗಾಗಿ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸುವಂತೆ ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್ಗೆ ಮಂಗಳವಾರ ಮನವಿ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಕೇಂದ್ರ ಸರ್ಕಾರ ಹಾಗೂ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಸಾಮಾಜಿಕ ಕಾರ್ಯಕರ್ತ ಹಾಗೂ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಬುಧವಾರ ನೋಟಿಸ್ ನೀಡಿದೆ. ಉತ್ತರಿಸಲು ಮೂರು ವಾರ ಕಾಲಾವಕಾಶ ನೀಡಲಾಗಿದೆ.</p>.<p>ಸಿಬಿಐ ಮಧ್ಯಂತರ ನಿರ್ದೇಶಕರಾಗಿ ಎಂ.ನಾಗೇಶ್ವರರಾವ್ ಅವರ ನೇಮಕದ ಬಗ್ಗೆ ಕೋರ್ಟ್ ನಿರ್ಧಾರವನ್ನು ಪ್ರಶ್ನಿಸಿ ಪ್ರಶಾಂತ್ ಭೂಷಣ್ ಅವರು ಟ್ವಿಟರ್ನಲ್ಲಿ ಟೀಕೆ ಮಾಡಿದ್ದರು.</p>.<p>‘ನ್ಯಾಯಾಂಗದ ಟೀಕೆಯು ಸಾರ್ವಜನಿಕ ಅಭಿಪ್ರಾಯದ ಮೇಲೆ ಪ್ರಭಾವ ಬೀರಲು ದಾರಿ ಮಾಡಿಕೊಡುತ್ತದೆ. ಅಲ್ಲದೆ ಇದು ನ್ಯಾಯದಾನ ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶ ಮಾಡಲು ಕಾರಣವಾಗುತ್ತದೆ’ ಎಂದು ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ ಹಾಗೂ ನವೀನ್ ಸಿಂಗ್ ಅವರನ್ನೊಳಗೊಂಡ ಪೀಠ ಅಭಿಪ್ರಾಯಪಟ್ಟಿದೆ.</p>.<p>ನ್ಯಾಯಾಂಗ ನಿಂದನೆಯಾಗಬಲ್ಲ ವಿಷಯದ ಕುರಿತು ವಕೀಲರು ಅಥವಾ ವ್ಯಕ್ತಿಯೊಬ್ಬರು ನ್ಯಾಯಾಲಯವನ್ನು ಟೀಕೆ ಮಾಡಬಹುದೇ ಎಂಬ ದೊಡ್ಡ ಪ್ರಶ್ನೆಗೆ ಇದು ಹಾದಿಮಾಡಿಕೊಟ್ಟಿದ್ದು, ಸುದೀರ್ಘ ಚರ್ಚೆ ಅಗತ್ಯವಿದೆ. ನೋಟಿಸ್ ನೀಡಲಾಗಿದ್ದು, ಮಾರ್ಚ್ 7ರಂದು ಮುಂದಿನ ವಿಚಾರಣೆ ನಡೆಸಲಾಗುವುದು ಎಂದು ಪೀಠ ಹೇಳಿದೆ.</p>.<p>ರಾವ್ ಅವರ ನೇಮಕದಲ್ಲಿ ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್ ಅನ್ನು ತಪ್ಪುದಾರಿಗೆ ಎಳೆದಿದೆ ಎಂದು ಭೂಷನ್ ಟ್ವೀಟ್ ಮಾಡಿದ್ದರು. ಹೀಗಾಗಿ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸುವಂತೆ ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್ಗೆ ಮಂಗಳವಾರ ಮನವಿ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>