ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಣಾದಿಂದ ಸಿಂಧಿಯಾ ಸ್ಪರ್ಧೆ

Last Updated 12 ಏಪ್ರಿಲ್ 2019, 20:33 IST
ಅಕ್ಷರ ಗಾತ್ರ

ನವದೆಹಲಿ: ತಮ್ಮ ಕುಟುಂಬದ ಭದ್ರಕೋಟೆ ಮಧ್ಯ ಪ್ರದೇಶದ ಗುಣಾದಿಂದ ಕಾಂಗ್ರೆಸ್‌ನ ಯುವ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಕಣಕ್ಕೆ ಇಳಿಸಲು ಕಾಂಗ್ರೆಸ್‌ ನಿರ್ಧರಿಸಿದೆ. ಪಂಜಾಬ್‌ನ ಆನಂದಪುರ ಸಾಹಿಬ್‌ ಕ್ಷೇತ್ರದಿಂದ ಮನೀಶ್‌ ತಿವಾರಿ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ಚಂಡಿಗಡ ಕ್ಷೇತ್ರದಿಂದ ಸ್ಪರ್ಧಿಸಲು ತಿವಾರಿ ಬಯಸಿದ್ದರು. ಆದರೆ, ಕೇಂದ್ರದ ಮಾಜಿ ಸಚಿವ ಪವನ್‌ ಕುಮಾರ್‌ ಬನ್ಸಾಲ್‌ ಅವರಿಗೆ ಇಲ್ಲಿಂದ ಟಿಕೆಟ್‌ ನೀಡಲಾಗಿದೆ. 2014ರಲ್ಲಿ ಈ ಕ್ಷೇತ್ರದಲ್ಲಿ ಬನ್ಸಾಲ್‌ ಅವರು ಬಿಜೆಪಿಯ ಕಿರಣ್‌ ಖೇರ್‌ ವಿರುದ್ಧ ಸೋತಿದ್ದರು.

ಲೋಕಸಭೆಯ ಏಳು ಕ್ಷೇತ್ರಗಳಿಗೆ ಕಾಂಗ್ರೆಸ್‌ ಪಕ್ಷವು ಶುಕ್ರವಾರ ಪಟ್ಟಿ ಬಿಡುಗಡೆ ಮಾಡಿದೆ.

ಪಂಜಾಬ್‌ನ ಬರ್ನಾಲಾದ ಮಾಜಿ ಶಾಸಕ ಕೇವಲ್‌ ಸಿಂಗ್ ಧಿಲ್ಲೋನ್‌ ಅವರು ಸಂಗ್ರೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಎಎಪಿಯ ಭಗವಂತ ಮಾನ್‌ ಅವರು ಇಲ್ಲಿನ ಹಾಲಿ ಸಂಸದ. ಪಂಜಾಬ್‌ನ ಮಾಜಿ ಸಚಿವ ಪರಮಿಂದರ್‌ ಸಿಂಗ್‌ ಧಿಂಡ್ಸಾ ಅವರು ಇಲ್ಲಿ ಶಿರೋಮಣಿ ಅಕಾಲಿ ದಳದ ಅಭ್ಯರ್ಥಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT