‘ಇವತ್ತು ಬೆಳಿಗ್ಗೆ ಜ್ಯೋತಿಯೊಂದಿಗೆ ಮಾತನಾಡಿದೆ. ಮುಂದಿನ ತಿಂಗಳಲ್ಲಿ ದೆಹಲಿಗೆ ಬರಬೇಕೆಂದು ಆಮಂತ್ರಣ ನೀಡಿದ್ದೇವೆ. ಲಾಕ್ಡೌನ್ ತೆರವುಗೊಳಿಸಿದ ನಂತರ ದೆಹಲಿಯ ಇಂದಿರಾಗಾಂಧಿ ಸೈಕ್ಲಿಂಗ್ ಅಕಾಡೆಮಿಯಲ್ಲಿ ಟ್ರಯಲ್ಸ್ ನೀಡಲು ವ್ಯವಸ್ಥೆ ಮಾಡಲಿದ್ದೇವೆ. ಅವರಿಗೆ ತಮ್ಮ ಗ್ರಾಮದಿಂದ ಬರಲು ಎಲ್ಲ ವ್ಯವಸ್ಥೆಯನ್ನೂ ನಾವೇ ಮಾಡುತ್ತೇವೆ. ವೆಚ್ಚವನ್ನೂ ನಮ್ಮ ಸಂಸ್ಥೆ ಭರಿಸುವುದು’ ಎಂದು ಸಂಸ್ಥೆಯ ಮುಖ್ಯಸ್ಥ ಓಂಕಾರ್ ಸಿಂಗ್ ತಿಳಿಸಿದ್ದಾರೆ.