<p><strong>ಭೋಪಾಲ್:</strong>ಮಧ್ಯಪ್ರದೇಶದ ಕಾಂಗ್ರೆಸ್ ಯುವ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿನ ಉಲ್ಲೇಖದಲ್ಲಿ ಕಾಂಗ್ರೆಸ್ ಪಕ್ಷದ ಹೆಸರನ್ನು ಬದಲಾಯಿಸಿದ್ದಾರೆ.</p>.<p>ತಮ್ಮ ಅಧಿಕೃತ ಖಾತೆಯಲ್ಲಿ ಈ ಮೊದಲು ಇದ್ದ ಸಂಸತ್ನ ಮಾಜಿ ಸದಸ್ಯ, ಇಂಧನ ಖಾತೆಯ ಮಾಜಿ ಸಚಿವ, ವಾಣಿಜ್ಯ ಮತ್ತು ಕೈಗಾರಿಕಾ ರಾಜ್ಯ ಖಾತೆ ಸಚಿವ; ಸಂವಹನ, ಐಟಿ ಖಾತೆಯರಾಜ್ಯ ಖಾತೆ ಸಚಿವ ಎಂದಿದ್ದ ಉಲ್ಲೇಖವನ್ನು ಕೈಬಿಟ್ಟಿದ್ದಾರೆ. ಬದಲಿಗೆ ‘ಸಾರ್ವಜನಿಕರ ಸೇವಕ ಮತ್ತು ಕ್ರಿಕೆಟ್ ಉತ್ಸಾಹಿ’ಎಂದು ಬರೆದುಕೊಂಡಿದ್ದಾರೆ.</p>.<p>ಈ ಕುರಿತು ಎಎನ್ಐ ಸುದ್ದಿಸಂಸ್ಥೆಗೆ ಸ್ಪಷ್ಟನೆ ನೀಡಿರುವ ಸಿಂಧಿಯಾ, ಒಂದು ತಿಂಗಳ ಹಿಂದೆಯೇ ನಾನು ಟ್ವಿಟರ್ನಲ್ಲಿನ ಉಲ್ಲೇಖವನ್ನು ಬದಲಾಯಿಸಿದ್ದೆ. ಜನರ ಸಲಹೆಯಂತೆನನ್ನ ವಿವರಗಳ ಉಲ್ಲೇಖವನ್ನುಕಡಿಮೆ ಮಾಡಿದ್ದೇನೆ. ಈ ಕುರಿತು ಹರಡಿರುವ ವದಂತಿಗಳು ಆಧಾರರಹಿತವಾಗಿವೆ ಎಂದು ಹೇಳಿದ್ದಾರೆ.</p>.<p>ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಕಮಲ್ನಾಥ್ ಅವರು ಅಧಿಕಾರ ಸ್ವೀಕರಿಸಿದಾಗಿನಿಂದಲೂ ಜ್ಯೋತಿರಾದಿತ್ಯ ಸಿಂಧಿಯಾ ಅವರ ಬೆಂಬಲಿಗರು ಸಿಂಧಿಯಾ ಅವರನ್ನು ಮಧ್ಯಪ್ರದೇಶದ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡುವಂತೆ ಒತ್ತಾಯಿಸಿದ್ದರು.</p>.<p>ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಮತ್ತು ಕಮಲ್ ನಾಥ್ ಅವರು ಮಧ್ಯ ಪ್ರದೇಶದ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ದಿವಂಗತ ಅರ್ಜುನ್ ಸಿಂಗ್ ಅವರ ಪುತ್ರ ಅಜಯ್ ಸಿಂಗ್ ಅವರನ್ನು ಶಿಫಾರಸು ಮಾಡಿರುವುದರಿಂದ ಬೇಸರಗೊಂಡು ಸಿಂಧಿಯಾ ಈ ನಿರ್ಧಾರಕ್ಕೆ ಬಂದಿರಬಹುದು ಎಂದು ಹೇಳಲಾಗುತ್ತಿದೆ.</p>.<p>ಸಿಂಧಿಯಾ ಅವರು ರಾಹುಲ್ ಗಾಂಧಿಗೆ ಹತ್ತಿರವಾಗಿದ್ದಾರೆಂದು ತಿಳಿದ ಪಕ್ಷದ ಹಿರಿಯ ನಾಯಕರುಅವರನ್ನು ನಿರ್ಲಕ್ಷಿಸಿದ್ದರಿಂದಾಗಿ ಈ ರೀತಿಯಲ್ಲಿ ಅಸಮಾಧಾನ ಹೊರಹಾಕಿದ್ದಾರೆ ಎಂದೂ ಹೇಳಲಾಗುತ್ತಿದೆ.</p>.<p>ಹರಿಯಾಣದ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅಶೋಕ್ ತನ್ವರ್ ಅವರು ಪಕ್ಷವನ್ನು ತೊರೆಯುವಾಗ, ಹಿರಿಯ ನಾಯಕರಿಂದ ಯುವ ನಾಯಕರನ್ನು ರಾಜಕೀಯವಾಗಿ ಮುಗಿಸಲಾಗುತ್ತಿದೆ ಎಂದು ದೂರಿದ್ದರು.</p>.<p>ಇದೀಗ ಸಿಂಧಿಯಾ ಅವರ ಈ ನಡೆಯು ಕಾಂಗ್ರೆಸ್ ಪಕ್ಷಕ್ಕೆ ಮುಜುಗರವನ್ನುಂಟು ಮಾಡಿದೆ. ಆದರೆಸಿಂಧಿಯಾ ರಾಜೀನಾಮೆಕುರಿತು ಅಧಿಕೃತ ಮಾಹಿತಿಗಳು ಲಭ್ಯವಾಗಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್:</strong>ಮಧ್ಯಪ್ರದೇಶದ ಕಾಂಗ್ರೆಸ್ ಯುವ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿನ ಉಲ್ಲೇಖದಲ್ಲಿ ಕಾಂಗ್ರೆಸ್ ಪಕ್ಷದ ಹೆಸರನ್ನು ಬದಲಾಯಿಸಿದ್ದಾರೆ.</p>.<p>ತಮ್ಮ ಅಧಿಕೃತ ಖಾತೆಯಲ್ಲಿ ಈ ಮೊದಲು ಇದ್ದ ಸಂಸತ್ನ ಮಾಜಿ ಸದಸ್ಯ, ಇಂಧನ ಖಾತೆಯ ಮಾಜಿ ಸಚಿವ, ವಾಣಿಜ್ಯ ಮತ್ತು ಕೈಗಾರಿಕಾ ರಾಜ್ಯ ಖಾತೆ ಸಚಿವ; ಸಂವಹನ, ಐಟಿ ಖಾತೆಯರಾಜ್ಯ ಖಾತೆ ಸಚಿವ ಎಂದಿದ್ದ ಉಲ್ಲೇಖವನ್ನು ಕೈಬಿಟ್ಟಿದ್ದಾರೆ. ಬದಲಿಗೆ ‘ಸಾರ್ವಜನಿಕರ ಸೇವಕ ಮತ್ತು ಕ್ರಿಕೆಟ್ ಉತ್ಸಾಹಿ’ಎಂದು ಬರೆದುಕೊಂಡಿದ್ದಾರೆ.</p>.<p>ಈ ಕುರಿತು ಎಎನ್ಐ ಸುದ್ದಿಸಂಸ್ಥೆಗೆ ಸ್ಪಷ್ಟನೆ ನೀಡಿರುವ ಸಿಂಧಿಯಾ, ಒಂದು ತಿಂಗಳ ಹಿಂದೆಯೇ ನಾನು ಟ್ವಿಟರ್ನಲ್ಲಿನ ಉಲ್ಲೇಖವನ್ನು ಬದಲಾಯಿಸಿದ್ದೆ. ಜನರ ಸಲಹೆಯಂತೆನನ್ನ ವಿವರಗಳ ಉಲ್ಲೇಖವನ್ನುಕಡಿಮೆ ಮಾಡಿದ್ದೇನೆ. ಈ ಕುರಿತು ಹರಡಿರುವ ವದಂತಿಗಳು ಆಧಾರರಹಿತವಾಗಿವೆ ಎಂದು ಹೇಳಿದ್ದಾರೆ.</p>.<p>ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಕಮಲ್ನಾಥ್ ಅವರು ಅಧಿಕಾರ ಸ್ವೀಕರಿಸಿದಾಗಿನಿಂದಲೂ ಜ್ಯೋತಿರಾದಿತ್ಯ ಸಿಂಧಿಯಾ ಅವರ ಬೆಂಬಲಿಗರು ಸಿಂಧಿಯಾ ಅವರನ್ನು ಮಧ್ಯಪ್ರದೇಶದ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡುವಂತೆ ಒತ್ತಾಯಿಸಿದ್ದರು.</p>.<p>ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಮತ್ತು ಕಮಲ್ ನಾಥ್ ಅವರು ಮಧ್ಯ ಪ್ರದೇಶದ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ದಿವಂಗತ ಅರ್ಜುನ್ ಸಿಂಗ್ ಅವರ ಪುತ್ರ ಅಜಯ್ ಸಿಂಗ್ ಅವರನ್ನು ಶಿಫಾರಸು ಮಾಡಿರುವುದರಿಂದ ಬೇಸರಗೊಂಡು ಸಿಂಧಿಯಾ ಈ ನಿರ್ಧಾರಕ್ಕೆ ಬಂದಿರಬಹುದು ಎಂದು ಹೇಳಲಾಗುತ್ತಿದೆ.</p>.<p>ಸಿಂಧಿಯಾ ಅವರು ರಾಹುಲ್ ಗಾಂಧಿಗೆ ಹತ್ತಿರವಾಗಿದ್ದಾರೆಂದು ತಿಳಿದ ಪಕ್ಷದ ಹಿರಿಯ ನಾಯಕರುಅವರನ್ನು ನಿರ್ಲಕ್ಷಿಸಿದ್ದರಿಂದಾಗಿ ಈ ರೀತಿಯಲ್ಲಿ ಅಸಮಾಧಾನ ಹೊರಹಾಕಿದ್ದಾರೆ ಎಂದೂ ಹೇಳಲಾಗುತ್ತಿದೆ.</p>.<p>ಹರಿಯಾಣದ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅಶೋಕ್ ತನ್ವರ್ ಅವರು ಪಕ್ಷವನ್ನು ತೊರೆಯುವಾಗ, ಹಿರಿಯ ನಾಯಕರಿಂದ ಯುವ ನಾಯಕರನ್ನು ರಾಜಕೀಯವಾಗಿ ಮುಗಿಸಲಾಗುತ್ತಿದೆ ಎಂದು ದೂರಿದ್ದರು.</p>.<p>ಇದೀಗ ಸಿಂಧಿಯಾ ಅವರ ಈ ನಡೆಯು ಕಾಂಗ್ರೆಸ್ ಪಕ್ಷಕ್ಕೆ ಮುಜುಗರವನ್ನುಂಟು ಮಾಡಿದೆ. ಆದರೆಸಿಂಧಿಯಾ ರಾಜೀನಾಮೆಕುರಿತು ಅಧಿಕೃತ ಮಾಹಿತಿಗಳು ಲಭ್ಯವಾಗಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>