<p><strong>ನವದೆಹಲಿ:</strong> ಕೆ.ಸಿ. ವ್ಯಾಲಿ (ಕೋರಮಂಗಲ ಮತ್ತು ಚಲ್ಲಘಟ್ಟ ಕಣಿವೆ) ಯೋಜನೆಗೆ ಅನುಮತಿ ನೀಡಿ ಹೈಕೋರ್ಟ್ ಹೊರಡಿಸಿದ್ದ ಮಧ್ಯಂತರ ಆದೇಶಕ್ಕೆ ಕಳೆದ ಜನವರಿ 7ರಂದು ತಡೆ ನೀಡಿದ್ದ ತನ್ನ ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತೆರವುಗೊಳಿಸಿದೆ.</p>.<p>ಮಧ್ಯಂತರ ಆದೇಶ ನೀಡಿರುವ ರಾಜ್ಯ ಹೈಕೋರ್ಟ್ನಲ್ಲಿಯೇ ಮುಂದಿನ ವಿಚಾರಣೆ ಎದುರಿಸುವಂತೆ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯಿ ನೇತೃತ್ವದ ಪೀಠ ಅರ್ಜಿದಾರರಿಗೆ ಸೂಚಿಸಿದೆ.</p>.<p>ಕುಡಿಯುವ ನೀರು ಪೂರೈಸುವುದು ಯೋಜನೆಯ ಉದ್ದೇಶವಾಗಿರದೆ, ಅಂತರ್ಜಲ ವೃದ್ಧಿಯೇ ಆಗಿದೆ. ಅಲ್ಲದೆ, ಚರಂಡಿ ನೀರನ್ನು ಶುದ್ಧೀಕರಿಸಿ ಕೆರೆಗಳಿಗೆ ಹರಿಸುವ ಜಗತ್ತಿನ ಮೊದಲ ಯೋಜನೆ ಇದಾಗಿದೆ ಎಂದು ಬೆಂಗಳೂರು ನೀರು ಸರಬ<br />ರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ಬಿ) ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರ ವಕೀಲ ಶ್ಯಾಂ ದಿವಾನ್ ನ್ಯಾಯಪೀಠಕ್ಕೆ ವಿವರಿಸಿದರು.</p>.<p>ವಿಶೇಷವಾಗಿ ಕೆರೆಗಳಲ್ಲಿ ಸಂಗ್ರಹವಾಗುವ ಶುದ್ಧೀಕರಿಸಿದ ನೀರು ಭೂಮಿಯೊಳಗೆ ಇಂಗುವ ಮೂಲಕ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಕಾರಣವಾಗುತ್ತದೆ.</p>.<p>ಇಂಗುವ ನೀರು ತಳ ಮುಟ್ಟುವ ಹೊತ್ತಿಗೆ ಹಲವಾರು ಪದರಗಳಲ್ಲಿ ಶುದ್ಧಗೊಳ್ಳುವುದರಿಂದ ರಾಸಾಯನಿಕ ಅಂಶ ಉಳಿಯುವ ಅಪಾ<br />ಯವೂ ಇಲ್ಲ ಎಂದು ಅವರು ಹೇಳಿದರು.</p>.<p>ಶುದ್ಧೀಕರಿಸಿ ಕೆರೆಗಳಿಗೆ ಹರಿಬಿಡುವ ನೀರಿನಲ್ಲಿ ಭಾರಿ ಪ್ರಮಾಣದ ರಾಸಾಯನಿಕ ಇರುವುದು ಪರೀಕ್ಷಾ ವರದಿಗಳಿಂದ ತಿಳಿದುಬಂದಿದೆ ಎಂದು ಅರ್ಜಿದಾರರ ಪರ ವಕೀಲ ಪ್ರಶಾಂತ್ ಭೂಷಣ್ ತಿಳಿಸಿದರಾದರೂ, ಹೈಕೋರ್ಟ್ನಲ್ಲೇ ವಾದ ಮಂಡಿಸುವಂತೆ ನ್ಯಾಯಪೀಠ ಹೇಳಿತು.</p>.<p>ರಾಜ್ಯದ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿನ 191 ಕೆರೆಗಳಿಗೆ ಶುದ್ಧೀಕರಿಸಿದ ಚರಂಡಿ ನೀರು ಹರಿಸುವ ಈ ಮಹತ್ವದ ಯೋಜನೆಗೆ ನೀಡಿದ್ದ ತಡೆಯನ್ನು ತೆರವುಗೊಳಿಸಿ ರಾಜ್ಯ ಹೈಕೋರ್ಟ್ ಕಳೆದ ಸೆಪ್ಟೆಂಬರ್ 28ರಂದು ಮಧ್ಯಂತರ ಆದೇಶ ನೀಡಿತ್ತು.</p>.<p>ಅದನ್ನು ಪ್ರಶ್ನಿಸಿ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಆಂಜನೇಯ ರೆಡ್ಡಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿತಡೆಯಾಜ್ಞೆ ನೀಡಿದ್ದ ಪೀಠವು,ರಾಜ್ಯ ಸರ್ಕಾರ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಜಲಮಂಡಳಿಗಳಿಂದ ಪ್ರತಿಕ್ರಿಯೆ ಕೋರಿತ್ತು.</p>.<p>ಆದೇಶ ಮಾರ್ಪಾಡು ಮಾಡುವಂತೆ ಕೋರಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಕಳೆದ ಮಾರ್ಚ್ 11ರಂದು ವಜಾಗೊಳಿಸಿದ್ದ ನ್ಯಾಯಪೀಠ, ಮೇಲ್ಮನವಿ ಜಾಳುಜಾಳಾಗಿದೆ. ಆದೇಶದ ದಿನಾಂಕಗಳೂ ಸಮರ್ಪಕವಾಗಿ ನಮೂದಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೆ.ಸಿ. ವ್ಯಾಲಿ (ಕೋರಮಂಗಲ ಮತ್ತು ಚಲ್ಲಘಟ್ಟ ಕಣಿವೆ) ಯೋಜನೆಗೆ ಅನುಮತಿ ನೀಡಿ ಹೈಕೋರ್ಟ್ ಹೊರಡಿಸಿದ್ದ ಮಧ್ಯಂತರ ಆದೇಶಕ್ಕೆ ಕಳೆದ ಜನವರಿ 7ರಂದು ತಡೆ ನೀಡಿದ್ದ ತನ್ನ ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತೆರವುಗೊಳಿಸಿದೆ.</p>.<p>ಮಧ್ಯಂತರ ಆದೇಶ ನೀಡಿರುವ ರಾಜ್ಯ ಹೈಕೋರ್ಟ್ನಲ್ಲಿಯೇ ಮುಂದಿನ ವಿಚಾರಣೆ ಎದುರಿಸುವಂತೆ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯಿ ನೇತೃತ್ವದ ಪೀಠ ಅರ್ಜಿದಾರರಿಗೆ ಸೂಚಿಸಿದೆ.</p>.<p>ಕುಡಿಯುವ ನೀರು ಪೂರೈಸುವುದು ಯೋಜನೆಯ ಉದ್ದೇಶವಾಗಿರದೆ, ಅಂತರ್ಜಲ ವೃದ್ಧಿಯೇ ಆಗಿದೆ. ಅಲ್ಲದೆ, ಚರಂಡಿ ನೀರನ್ನು ಶುದ್ಧೀಕರಿಸಿ ಕೆರೆಗಳಿಗೆ ಹರಿಸುವ ಜಗತ್ತಿನ ಮೊದಲ ಯೋಜನೆ ಇದಾಗಿದೆ ಎಂದು ಬೆಂಗಳೂರು ನೀರು ಸರಬ<br />ರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ಬಿ) ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರ ವಕೀಲ ಶ್ಯಾಂ ದಿವಾನ್ ನ್ಯಾಯಪೀಠಕ್ಕೆ ವಿವರಿಸಿದರು.</p>.<p>ವಿಶೇಷವಾಗಿ ಕೆರೆಗಳಲ್ಲಿ ಸಂಗ್ರಹವಾಗುವ ಶುದ್ಧೀಕರಿಸಿದ ನೀರು ಭೂಮಿಯೊಳಗೆ ಇಂಗುವ ಮೂಲಕ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಕಾರಣವಾಗುತ್ತದೆ.</p>.<p>ಇಂಗುವ ನೀರು ತಳ ಮುಟ್ಟುವ ಹೊತ್ತಿಗೆ ಹಲವಾರು ಪದರಗಳಲ್ಲಿ ಶುದ್ಧಗೊಳ್ಳುವುದರಿಂದ ರಾಸಾಯನಿಕ ಅಂಶ ಉಳಿಯುವ ಅಪಾ<br />ಯವೂ ಇಲ್ಲ ಎಂದು ಅವರು ಹೇಳಿದರು.</p>.<p>ಶುದ್ಧೀಕರಿಸಿ ಕೆರೆಗಳಿಗೆ ಹರಿಬಿಡುವ ನೀರಿನಲ್ಲಿ ಭಾರಿ ಪ್ರಮಾಣದ ರಾಸಾಯನಿಕ ಇರುವುದು ಪರೀಕ್ಷಾ ವರದಿಗಳಿಂದ ತಿಳಿದುಬಂದಿದೆ ಎಂದು ಅರ್ಜಿದಾರರ ಪರ ವಕೀಲ ಪ್ರಶಾಂತ್ ಭೂಷಣ್ ತಿಳಿಸಿದರಾದರೂ, ಹೈಕೋರ್ಟ್ನಲ್ಲೇ ವಾದ ಮಂಡಿಸುವಂತೆ ನ್ಯಾಯಪೀಠ ಹೇಳಿತು.</p>.<p>ರಾಜ್ಯದ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿನ 191 ಕೆರೆಗಳಿಗೆ ಶುದ್ಧೀಕರಿಸಿದ ಚರಂಡಿ ನೀರು ಹರಿಸುವ ಈ ಮಹತ್ವದ ಯೋಜನೆಗೆ ನೀಡಿದ್ದ ತಡೆಯನ್ನು ತೆರವುಗೊಳಿಸಿ ರಾಜ್ಯ ಹೈಕೋರ್ಟ್ ಕಳೆದ ಸೆಪ್ಟೆಂಬರ್ 28ರಂದು ಮಧ್ಯಂತರ ಆದೇಶ ನೀಡಿತ್ತು.</p>.<p>ಅದನ್ನು ಪ್ರಶ್ನಿಸಿ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಆಂಜನೇಯ ರೆಡ್ಡಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿತಡೆಯಾಜ್ಞೆ ನೀಡಿದ್ದ ಪೀಠವು,ರಾಜ್ಯ ಸರ್ಕಾರ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಜಲಮಂಡಳಿಗಳಿಂದ ಪ್ರತಿಕ್ರಿಯೆ ಕೋರಿತ್ತು.</p>.<p>ಆದೇಶ ಮಾರ್ಪಾಡು ಮಾಡುವಂತೆ ಕೋರಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಕಳೆದ ಮಾರ್ಚ್ 11ರಂದು ವಜಾಗೊಳಿಸಿದ್ದ ನ್ಯಾಯಪೀಠ, ಮೇಲ್ಮನವಿ ಜಾಳುಜಾಳಾಗಿದೆ. ಆದೇಶದ ದಿನಾಂಕಗಳೂ ಸಮರ್ಪಕವಾಗಿ ನಮೂದಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>