ಸುರೇಂದ್ರನ್ ಅವರು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಮಾರು 10 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಪಕ್ಷದ ಯುವಮೋರ್ಚಾ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಕೇರಳ ಪಂಚಾಯ್ತಿ ಚುನಾವಣೆಗೆ ಇನ್ನು ಎಂಟು ತಿಂಗಳಷ್ಟೇ ಬಾಕಿ ಇದ್ದು, ಇದು ಸುರೇಂದ್ರನ್ ಅವರ ಎದುರಿರುವಮೊದಲ ಸವಾಲಾಗಿದೆ. 2021ರ ಮೇನಲ್ಲಿ ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.