ನವದೆಹಲಿ: ಸಿಎಎ-ಎನ್ಆರ್ಸಿ ವಿರೋಧಿ ಪ್ರತಿಭಟನೆ ಸಂದರ್ಭ 'ಕಾಗಜ್ ನಹೀಂ ದಿಖಾಯೇಂಗೇ' (ದಾಖಲೆಪತ್ರ ತೋರಿಸುವುದಿಲ್ಲ) ಎಂದು ಘೋಷಣೆ ಕೂಗಿದವರಿಗೆ ಸೋಲಾಗಲಿದೆ ಎಂದು ಹೇಳಿರುವ ಬಿಜೆಪಿ ಮಾಜಿ ಸಂಘಟನಾ ಕಾರ್ಯದರ್ಶಿರಾಮ್ ಲಾಲ್, ಮತದಾನಕ್ಕೆ ಹೋಗುವಾಗ ಅಗತ್ಯ ದಾಖಲೆಗಳನ್ನು ಒಯ್ಯಿರಿ ಎಂದು ದೆಹಲಿ ಮತದಾರರಿಗೆ ಮನವಿ ಮಾಡಿಕೊಂಡಿದ್ದಾರೆ.