‘ಕಲಬುರ್ಗಿ ಹತ್ಯೆಗೆ ಸಂಬಂಧಿಸಿದಂತೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದ್ದು, ಸೆಷನ್ಸ್ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಇನ್ನೂ ಪತ್ತೆ ಮಾಡಿಲ್ಲ. ಹೀಗಾಗಿ ತನಿಖೆಯ ಮೇಲ್ವಿಚಾರಣೆ ನಡೆಸುವುದರಲ್ಲಿ ಯಾವುದೇ ಅರ್ಥ ಇಲ್ಲ’ ಎಂದು ನ್ಯಾಯಮೂರ್ತಿಗಳಾದ ಆರ್.ಎಫ್.ನರಿಮನ್, ಎಸ್.ರವೀಂದ್ರ ಭಟ್ ಅವರಿರುವ ಪೀಠ ಅಭಿಪ್ರಾಯಪಟ್ಟಿದೆ. ಕರ್ನಾಟಕ ಸರ್ಕಾರ ಪರ ಹಾಜರಿದ್ದ ಹಿರಿಯ ವಕೀಲ ದೇವದತ್ತ ಕಾಮತ್, ‘ಕರ್ನಾಟಕ ಹೈಕೋರ್ಟ್ ಸಹ ತನಿಖೆಯ ಮೇಲ್ವಿಚಾರಣೆಯನ್ನು ನಿಲ್ಲಿಸಿದೆ’ ಎಂದು ಹೇಳಿದರು.