ರಾಜ್ಯಪಾಲರಾಗಿ ಸಾಂವಿಧಾನಾತ್ಮಕ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ಕಾರಣ ಬಾಬರಿ ಮಸೀದಿ ಧ್ವಂಸ ಪ್ರಕರಣ ವಿಚಾರಣೆ ಸೇರಿದಂತೆ ಇತರ ಕಾನೂನಾತ್ಮಕ ಪ್ರಕ್ರಿಯೆಗಳಿಂದ ಸಿಂಗ್ ಅವರಿಗೆ ವಿನಾಯಿತಿ ಸಿಕ್ಕಿತ್ತು. ಆದರೆ, ಬಿಜೆಪಿ ಹಿರಿಯ ನಾಯಕರಾದಎಲ್.ಕೆ. ಅಡ್ವಾಣಿ, ಮುರುಳಿ ಮನೋಹರ ಜೋಷಿ ಮತ್ತು ಉಮಾ ಭಾರತಿ ಅವರನ್ನು ವಿಚಾರಣೆಗೆ ಒಳಪಡಿಸಲು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು.