<p><strong>ಚೆನ್ನೈ:</strong>ಯುವಕರ ಪ್ರಶ್ನೆಗಳನ್ನು ಹತ್ತಿಕ್ಕುವುದೆಂದರೆಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದರ್ಥ ಎಂದುನಟ, ರಾಜಕಾರಣಿ ಕಮಲ ಹಾಸನ್ ಹೇಳಿದ್ದಾರೆ.</p>.<p>ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಕ್ರಮಕ್ಕೆ ಸಂಬಂಧಿಸಿಪ್ರತಿಕ್ರಿಯೆ ನೀಡಿದ ಅವರು, ‘ಯುವಕರು ರಾಜಕೀಯವಾಗಿ ಜಾಗೃತರಾಗಿರಬೇಕು. ಅವರು ಪ್ರಶ್ನೆ ಕೇಳಬೇಕು. ಅವರ ಪ್ರಶ್ನೆಗಳನ್ನು ಹತ್ತಿಕ್ಕಲಾಗುತ್ತಿದೆಎಂದರೆ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದರ್ಥ. ನಾನೂ ಒಬ್ಬ ವಿದ್ಯಾರ್ಥಿ (ನನ್ನ ಕ್ಷೇತ್ರದಲ್ಲಿ). ವಿದ್ಯಾರ್ಥಿಗಳ ಪರ ದನಿಯೆತ್ತುವುದನ್ನು ಮುಂದುವರಿಸಲಿದ್ದೇನೆ’ ಎಂದು ಹೇಳಿದ್ದಾರೆ.</p>.<p>ಪೌರತ್ವ (ತಿದ್ದುಪಡಿ) ಮಸೂದೆ ವಿರುದ್ಧದ ಹೋರಾಟವನ್ನು ಕಾನೂನು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸರಿಯಾದ ದಿಕ್ಕಿನಲ್ಲಿ ಮುನ್ನಡೆಸಲಿದ್ದೇವೆ ಎಂದೂ ಅವರು ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/10-arrested-for-jamia-violence-none-students-691013.html" itemprop="url" target="_blank">ಜಾಮಿಯಾ ವಿವಿ ಹಿಂಸಾಚಾರ: 10 ಮಂದಿಯ ಬಂಧನ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong>ಯುವಕರ ಪ್ರಶ್ನೆಗಳನ್ನು ಹತ್ತಿಕ್ಕುವುದೆಂದರೆಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದರ್ಥ ಎಂದುನಟ, ರಾಜಕಾರಣಿ ಕಮಲ ಹಾಸನ್ ಹೇಳಿದ್ದಾರೆ.</p>.<p>ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಕ್ರಮಕ್ಕೆ ಸಂಬಂಧಿಸಿಪ್ರತಿಕ್ರಿಯೆ ನೀಡಿದ ಅವರು, ‘ಯುವಕರು ರಾಜಕೀಯವಾಗಿ ಜಾಗೃತರಾಗಿರಬೇಕು. ಅವರು ಪ್ರಶ್ನೆ ಕೇಳಬೇಕು. ಅವರ ಪ್ರಶ್ನೆಗಳನ್ನು ಹತ್ತಿಕ್ಕಲಾಗುತ್ತಿದೆಎಂದರೆ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದರ್ಥ. ನಾನೂ ಒಬ್ಬ ವಿದ್ಯಾರ್ಥಿ (ನನ್ನ ಕ್ಷೇತ್ರದಲ್ಲಿ). ವಿದ್ಯಾರ್ಥಿಗಳ ಪರ ದನಿಯೆತ್ತುವುದನ್ನು ಮುಂದುವರಿಸಲಿದ್ದೇನೆ’ ಎಂದು ಹೇಳಿದ್ದಾರೆ.</p>.<p>ಪೌರತ್ವ (ತಿದ್ದುಪಡಿ) ಮಸೂದೆ ವಿರುದ್ಧದ ಹೋರಾಟವನ್ನು ಕಾನೂನು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸರಿಯಾದ ದಿಕ್ಕಿನಲ್ಲಿ ಮುನ್ನಡೆಸಲಿದ್ದೇವೆ ಎಂದೂ ಅವರು ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/10-arrested-for-jamia-violence-none-students-691013.html" itemprop="url" target="_blank">ಜಾಮಿಯಾ ವಿವಿ ಹಿಂಸಾಚಾರ: 10 ಮಂದಿಯ ಬಂಧನ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>