<p><strong>ಭೋಪಾಲ್: </strong>ಮಧ್ಯಪ್ರದೇಶ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಕಮಲನಾಥ್ ಸಂಪುಟದ ಎಲ್ಲ ಸಚಿವರೂ ಸೋಮವಾರ ರಾತ್ರಿ ರಾಜೀನಾಮೆ ನೀಡಿದ್ದಾರೆ.</p>.<p><strong>ಇದನ್ನೂ ಓದಿ: <a href="https://www.prajavani.net/stories/national/mp-govt-in-crisis-scindia-and-17-mlas-untraceable-711179.html">ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ‘ಸಂಪರ್ಕಕ್ಕೆ ಸಿಗದ’ ಸಿಂಧಿಯಾ, 17 ಶಾಸಕರು</a></strong></p>.<p>ಪಕ್ಷದ ಶಾಸಕರೊಂದಿಗೆ ಚರ್ಚಿಸಲು ಕಮಲನಾಥ್ ಅವರು ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.</p>.<p>ಸಂಪುಟ ಪುನಾರಚನೆಗೆ ಕಮಲನಾಥ್ ಅವರು ನಿರ್ಧಾರಿಸಿದ್ದು, ಜ್ಯೋತಿರಾಧಿತ್ಯ ಸಿಂಧ್ಯ ಬೆಂಬಲಿಗರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕೇ ಎಲ್ಲ ಸಚಿವರಿಂದಲೂ ರಾಜೀನಾಮೆ ಪಡೆಯಲಾಗಿದೆ.</p>.<p>ಸರ್ಕಾರವನ್ನು ಉಳಿಸಿಕೊಳ್ಳುವ ಕೊನೇ ಹಂತದ ಪ್ರಯತ್ನವಾಗಿ ಕರ್ನಾಟಕದಲ್ಲಿ ಕುಮಾರಸ್ವಾಮಿ ನೇತೃತ್ವದ ಮಂತ್ರಿಮಂಡಲದ ಸಚಿವರೂ ರಾಜೀನಾಮೆ ನೀಡಿದ್ದರು.</p>.<p>ಇನ್ನು ಈ ಎಲ್ಲ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಿರುವ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವಾಣ್, ’ ಇದು ಕಾಂಗ್ರೆಸ್ನ ಆಂತರಿಕ ವಿಚಾರ. ನಾನು ಮಾತನಾಡಲು ಇಷ್ಟಪಡಲಾರೆ. ಸರ್ಕಾರವನ್ನು ಬೀಳಿಸುವ ಕೆಲಸಕ್ಕೆ ನಾವು ಕೈ ಹಾಕುವುದಿಲ್ಲ ಎಂದು ಮೊದಲೇ ಹೇಳಿದ್ದೇವೆ,’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್: </strong>ಮಧ್ಯಪ್ರದೇಶ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಕಮಲನಾಥ್ ಸಂಪುಟದ ಎಲ್ಲ ಸಚಿವರೂ ಸೋಮವಾರ ರಾತ್ರಿ ರಾಜೀನಾಮೆ ನೀಡಿದ್ದಾರೆ.</p>.<p><strong>ಇದನ್ನೂ ಓದಿ: <a href="https://www.prajavani.net/stories/national/mp-govt-in-crisis-scindia-and-17-mlas-untraceable-711179.html">ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ‘ಸಂಪರ್ಕಕ್ಕೆ ಸಿಗದ’ ಸಿಂಧಿಯಾ, 17 ಶಾಸಕರು</a></strong></p>.<p>ಪಕ್ಷದ ಶಾಸಕರೊಂದಿಗೆ ಚರ್ಚಿಸಲು ಕಮಲನಾಥ್ ಅವರು ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.</p>.<p>ಸಂಪುಟ ಪುನಾರಚನೆಗೆ ಕಮಲನಾಥ್ ಅವರು ನಿರ್ಧಾರಿಸಿದ್ದು, ಜ್ಯೋತಿರಾಧಿತ್ಯ ಸಿಂಧ್ಯ ಬೆಂಬಲಿಗರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕೇ ಎಲ್ಲ ಸಚಿವರಿಂದಲೂ ರಾಜೀನಾಮೆ ಪಡೆಯಲಾಗಿದೆ.</p>.<p>ಸರ್ಕಾರವನ್ನು ಉಳಿಸಿಕೊಳ್ಳುವ ಕೊನೇ ಹಂತದ ಪ್ರಯತ್ನವಾಗಿ ಕರ್ನಾಟಕದಲ್ಲಿ ಕುಮಾರಸ್ವಾಮಿ ನೇತೃತ್ವದ ಮಂತ್ರಿಮಂಡಲದ ಸಚಿವರೂ ರಾಜೀನಾಮೆ ನೀಡಿದ್ದರು.</p>.<p>ಇನ್ನು ಈ ಎಲ್ಲ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಿರುವ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವಾಣ್, ’ ಇದು ಕಾಂಗ್ರೆಸ್ನ ಆಂತರಿಕ ವಿಚಾರ. ನಾನು ಮಾತನಾಡಲು ಇಷ್ಟಪಡಲಾರೆ. ಸರ್ಕಾರವನ್ನು ಬೀಳಿಸುವ ಕೆಲಸಕ್ಕೆ ನಾವು ಕೈ ಹಾಕುವುದಿಲ್ಲ ಎಂದು ಮೊದಲೇ ಹೇಳಿದ್ದೇವೆ,’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>