ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಮಲನಾಥ್‌ ಸಂಪುಟದ 20 ಸಚಿವರ ರಾಜೀನಾಮೆ 

Last Updated 10 ಮಾರ್ಚ್ 2020, 1:40 IST
ಅಕ್ಷರ ಗಾತ್ರ

ಭೋಪಾಲ್‌: ಮಧ್ಯಪ್ರದೇಶ ‌ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ‌ಕಮಲನಾಥ್ ಸಂಪುಟದ ಎಲ್ಲ‌ ಸಚಿವರೂ ಸೋಮವಾರ ರಾತ್ರಿ ರಾಜೀನಾಮೆ ನೀಡಿದ್ದಾರೆ.

ಪಕ್ಷದ ಶಾಸಕರೊಂದಿಗೆ ಚರ್ಚಿಸಲು ಕಮಲನಾಥ್‌ ಅವರು ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

ಸಂಪುಟ‌ ಪುನಾರಚನೆಗೆ ಕಮಲನಾಥ್‌ ಅವರು ನಿರ್ಧಾರಿಸಿದ್ದು, ಜ್ಯೋತಿರಾಧಿತ್ಯ ಸಿಂಧ್ಯ ಬೆಂಬಲಿಗರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕೇ ಎಲ್ಲ ಸಚಿವರಿಂದಲೂ ರಾಜೀನಾಮೆ ಪಡೆಯಲಾಗಿದೆ.

ಸರ್ಕಾರವನ್ನು ಉಳಿಸಿಕೊಳ್ಳುವ ಕೊನೇ ಹಂತದ ಪ್ರಯತ್ನವಾಗಿ ಕರ್ನಾಟಕದಲ್ಲಿ ಕುಮಾರಸ್ವಾಮಿ ನೇತೃತ್ವದ ಮಂತ್ರಿಮಂಡಲದ ಸಚಿವರೂ ರಾಜೀನಾಮೆ ನೀಡಿದ್ದರು.

ಇನ್ನು ಈ ಎಲ್ಲ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಿರುವ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌವಾಣ್‌, ’ ಇದು ಕಾಂಗ್ರೆಸ್‌ನ ಆಂತರಿಕ ವಿಚಾರ. ನಾನು ಮಾತನಾಡಲು ಇಷ್ಟಪಡಲಾರೆ. ಸರ್ಕಾರವನ್ನು ಬೀಳಿಸುವ ಕೆಲಸಕ್ಕೆ ನಾವು ಕೈ ಹಾಕುವುದಿಲ್ಲ ಎಂದು ಮೊದಲೇ ಹೇಳಿದ್ದೇವೆ,’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT